ಉಡುಪಿ: ಗಾಂಜಾ ಸೇವನೆ- ಯುವಕನ ವಿರುದ್ಧ ಪ್ರಕರಣ
ಉಡುಪಿ ಸೆ.9(ಉಡುಪಿ ಟೈಮ್ಸ್ ವರದಿ): ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಹೊಸ ಕೆ.ಎಸ್. ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಓರ್ವ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಉಡುಪಿ ನಗರ ಠಾಣಾ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿ ಇದ್ದ ವೇಳೆ ಉಡುಪಿಯ ಬನ್ನಂಜೆಯಲ್ಲಿರುವ ಹೊಸ ಕೆ.ಎಸ್. ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿಯಿದ್ದ ಫರ್ವೆಜ್ (24) ಎಂಬಾತನನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದುಕೊಂಡು ಮಣಿಪಾಲದ ಫಾರೆನ್ಸಿಕ್ ವಿಭಾಗದ ವೈದ್ಯರ ಬಳಿ ವೈದ್ಯಕೀಯ ತಪಾಸಣೆ ನಡೆಸಿದ್ದರು. ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಕಾರಣ ಈತನ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.