ಬ್ರಹ್ಮಾವರ: ಬುಲೆಟ್ ಟ್ಯಾಂಕರ್ ಅಪಘಾತ- ತಪ್ಪಿದ ಭಾರೀ ದುರಂತ

ಬ್ರಹ್ಮಾವರ ಜ.29(ಉಡುಪಿ ಟೈಮ್ಸ್ ವರದಿ): ಗ್ಯಾಸ್ ಬುಲೆಟ್ ಟ್ಯಾಂಕರ್ ವೊಂದು ವಾಹನವೊಂದಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ ಚರ್ಚ್ ಎದುರು ಇಂದು ಸಂಜೆ ನಡೆದಿದೆ.

ಅಪಘಾತದಲ್ಲಿ ವಾಹನ ಚಾಲಕನ ಎರಡು ಕಾಲುಗಳು ತುಂಡಾಗಿದ್ದು, ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದೀಗ ಈ ಅಪಘಾತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಾಮಾಜಿಕ ಕಾರ್ಯಕರ್ತರಾದ ಅನ್ಸಾರ್ ಅಹಮದ್ ರವರು, ಹೆದ್ದಾರಿಯ ರಸ್ತೆ ಮಧ್ಯದಲ್ಲಿ ನವಯುಗ ಕಂಪನಿಗೆ ಸೇರಿದ ವಾಹನಗಳು ಯಾವುದೇ ಸುರಕ್ಷಿತ ನಿಯಮಗಳನ್ನು ಅನುಸರಿಸದೇ ಸ್ವಚ್ಛತೆ ಹಾಗೂ ಇನ್ನಿತರ ಕೆಲಸಗಳನ್ನು ನಡೆಸುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಇಂದು ಸಂಜೆ 5 ಗಂಟೆ ಸುಮಾರಿಗೆ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬುಲೆಟ್ ಟ್ಯಾಂಕರ್ ರಸ್ತೆಯಲ್ಲಿ ಯಾವುದೇ ಸೂಚನಾ ಫಲಕವನ್ನು ಅಳವಡಿಸದೆ ನಿಂತಿದ್ದ ನವಯುಗ ಕಂಪನಿಗೆ ಸೇರಿದ ವಾಹನ ಒಂದಕ್ಕೆ ಡಿಕ್ಕಿ ಹೊಡೆದಿದೆ. ವಾಹನ ಅಪಘಾತಕ್ಕೆ ನವಯುಗ ಕಂಪನಿಯ ಅಜಾಗರೂಕತೆಯಿಂದ ಉಂಟಾಗಿದೆ ಎಂದು ಆರೋಪಿಸಿದ್ದಾರೆ. ಹಾಗೂ ಕಂಪನಿ ಚಾಲಕನಿಗೆ ಸೂಕ್ತ ಪರಿಹಾರವನ್ನು ಒದಗಿಸಿ ಕೊಡಬೇಕು ಹಾಗೂ ಮುಂದಕ್ಕೆ ಇಂತಹ ಘಟನೆಗಳು ನಡೆಯದಂತೆ ಕಂಪೆನಿಯವರು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!