ಮಣಿಪಾಲ: ಯುವಕ ನೇಣಿಗೆ ಶರಣು

ಮಣಿಪಾಲ ಫೆ.19 (ಉಡುಪಿ ಟೈಮ್ಸ್ ವರದಿ): ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಯುವಕನ ಹೆಸರನ್ನು ಸೂರಜ್ (22) ಎಂದು ಗುರುತಿಸಲಾಗಿದೆ. ಇವರು ಫೆ.17 ರಂದು ರಾತ್ರಿ ತಮ್ಮ ಚಿಕ್ಕಮ್ಮನೊಂದಿಗೆ ಮಾತನಾಡಿ ನಿದ್ರೆ ಮಾಡುವುದಾಗಿ ಹೇಳಿ ರೂಮಿಗೆ ಹೋಗಿದ್ದರು. ಮರುದಿನ ಬೆಳಿಗ್ಗೆ ಸೂರಜ್ ಅವರನ್ನು ಎಬ್ಬಿಸಲು ಚಿಕ್ಕಮ್ಮ ಹೋದಾಗ ರೂಮಿನಲ್ಲಿ ಸೂರಜ್ ಅವರು ಇಲ್ಲದೇ ಇರುವುದನ್ನು ಗಮನಿಸಿ ಮನೆಯ ಮೇಲೆ ಬಂದು ನೋಡಿದಾಗ ಸೂರಜ್ ಅವರು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!