ಕುಂದಾಪುರ: ಇಸ್ಪೀಟು ಜುಗಾರಿ-7 ಮಂದಿ ವಶ

ಕುಂದಾಪುರ ಫೆ.19 (ಉಡುಪಿ ಟೈಮ್ಸ್ ವರದಿ): ಇಸ್ಪೀಟು ಜುಗಾರಿ ಅಡ್ಡೆಗೆ ದಾಳಿ ಮಾಡಿದ ಪೊಲೀಸರು 7 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಹಾಡಿಯಲ್ಲಿ ಇಸ್ಪೀಟು ಜುಗಾರಿ ಆಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು. ಸ್ಥಳಕ್ಕೆ ದಾಳಿ ಮಾಡಿ, ಅಶೋಕ, ರಾಜೇಶ್, ಮಹೇಶ, ಸತೀಶ್, ನಾಗರಾಜ, ಸಂದೇಶ, ಮಕರ ಎಂಬ 7 ಮಂದಿಯನ್ನು ವಶಕ್ಕೆ ಪಡೆದು, ಅವರ ಬಳಿ ಇದ್ದ 3,400 ರೂ. ನಗದನ್ನು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!