ಗಂಗೊಳ್ಳಿ: ಇಸ್ಪೀಟು ಜುಗಾರಿ-ಮೂವರು ವಶ

ಗಂಗೊಳ್ಳಿ ಫೆ.20 (ಉಡುಪಿ ಟೈಮ್ಸ್ ವರದಿ): ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಇಸ್ಪೀಟು ಜುಗಾರಿ ಅಡ್ಡೆಗೆ ದಾಳಿ ಮಾಡಿದ ಗಂಗೊಳ್ಳಿ ಠಾಣಾ ಪೊಲೀಸರು ಮೂರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗಂಗೊಳ್ಳಿ ಗ್ರಾಮದ ದಾಕುಹಿತ್ಲು ರಿಂಗ್ ರೋಡ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಗಂಗೊಳ್ಳಿ ಠಾಣಾ ಪೊಲೀಸರು, ಸ್ಥಳಕ್ಕೆ ದಾಳಿ ಮಾಡಿ, ಆರೋಪಿಗಳಾದ ಮೋಹನ, ಕೃಷ್ಣ , ಬೈರು ಚಿಕ್ಕ ಎಂಬವರನ್ನು ವಶಕ್ಕೆ ಪಡೆದು, ಅವರ ಬಳಿ ಇದ್ದ 640 ರೂ. ನಗದು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ದಾಳಿ ವೇಳೆ ದಾಕುಹಿತ್ಲುವಿನ
ಅರುಣ , ರವಿ , ಮಿಥುನ , ಚೇತನ , ಕಿರಣ , ರಾಘವೇಂದ್ರ , ಅಣ್ಣಪ್ಪ , ಸುನಿಲ್ ಎಂಬುವವರು ಸ್ಥಳದಿಂದ ಓಡಿ ಹೋಗಿರುತ್ತಾರೆ ಎಂಬುದಾಗಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!