ಗಂಗೊಳ್ಳಿ: ಸಾಲ ತೀರಿಸಲಾಗದೆ ವ್ಯಕ್ತಿ ಆತ್ಮಹತ್ಯೆ

ಗಂಗೊಳ್ಳಿ ಫೆ.22(ಉಡುಪಿ ಟೈಮ್ಸ್ ವರದಿ): ಸಾಲ ತೀರಿಸಲಾಗದೆ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಗಂಗೊಳ್ಳಿ ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಕಿರಣ್ (32) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೀನುಗಾರಿಕೆ ಸಲುವಾಗಿ ಸಾಲ ಮಾಡಿ ದೋಣಿ ಖರೀದಿಸಿದ್ದರು. ಆದರೆ ಸಾಲ ತೀರಿಸಲಾಗದೆ ಮನನೊಂದು ನಿನ್ನೆ ಬೆಳಿಗ್ಗೆಯಿಂದ ಸಂಜೆಯ ಅವಧಿಯಲ್ಲಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ತಮ್ಮ ನೀಡಿದ ಮಾಹಿತಿಯಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!