ಕುಂದಾಪುರ: ಗೂಡ್ಸ್ ವಾಹನ ಡಿಕ್ಕಿ-ಪಾದಚಾರಿ ಮೃತ್ಯು

ಕುಂದಾಪುರ ಫೆ.23(ಉಡುಪಿ ಟೈಮ್ಸ್ ವರದಿ): ಗೂಡ್ಸ್ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರದ ಹಂಗಳೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅನಂತಯ್ಯ (68) ಮೃತಪಟ್ಟ ಪಾದಚಾರಿ, ಇವರು ನಿನ್ನೆ ರಾತ್ರಿ ಹಂಗಳೂರು ಗ್ರಾಮದ ಶಬರಿ ಹೋಟೇಲ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಗೂಡ್ಸ್ ವಾಹನವನ್ನು ಚಲಾಯಿಸಿಕೊಂಡು ಬಂದ ಅದರ ಚಾಲಕ ಅಬುಬಕ್ಕರ್ ಎಂಬಾತ ಅನಂತಯ್ಯ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ರಸ್ತೆಗೆ ಬಿದ್ದು, ಗಂಭೀರ ಗಾಯಗೊಂಡ ಅನಂತಯ್ಯ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!