ಉಡುಪಿ: ಗಾಂಜಾ ಸೇವನೆ- ಇಬ್ಬರು ವಶ

ಉಡುಪಿ ಫೆ.24(ಉಡುಪಿ ಟೈಮ್ಸ್ ವರದಿ): ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಉಡುಪಿ ಸೆನ್ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಸೆನ್ ಠಾಣಾ ಪೊಲೀಸರು, ಶಿವಳ್ಳಿ  ಗ್ರಾಮದ ಕರಂಬಳ್ಳಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ನಿಟ್ಟೂರಿನ ದೇಶ್‌‌ರಾಜ್(19)  ಹಾಗೂ ಉದ್ಯಾವರದ ಪಿತ್ರೋಡಿಯ ನಾಗರಾಜ್ (21) ಎಂಬ ಇಬ್ಬರನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ಮಣಿಪಾಲದ ಫಾರೆನ್ಸಿಕ್ ವಿಭಾಗದ ವೈದ್ಯರ ಬಳಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಈ ಇಬ್ಬರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಕಾರಣ ಇಬ್ಬರ ವಿರುದ್ಧ ಸೆನ್‌ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!