ಕರಪತ್ರ, ಜಾಹೀರಾತು ಮೂಲಕ ಚುನಾವಣೆ ಪ್ರಚಾರಕ್ಕೆ ಪೂರ್ವಾನುಮತಿ ಕಡ್ಡಾಯ : ಜಿಲ್ಲಾಧಿಕಾರಿ

ಕರಪತ್ರ, ಜಾಹೀರಾತು ಮೂಲಕ ಚುನಾವಣೆ ಪ್ರಚಾರಕ್ಕೆ ಪೂರ್ವಾನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ, ಮಾ.2 : ಚುನಾವಣಾ ಆಯೋಗ ಸೂಚಿಸಿರುವ ನಿಯಮಾನುಸಾರ ಚುನಾವಣೆಗೆ ಸಂಭಂದಿಸಿದ ಯಾವುದೇ ರೀತಿಯ ಕರಪತ್ರ ಹಾಗೂ ಜಾಹೀರಾತು ಮೂಲಕ ಚುನಾವಣೆ ಪ್ರಚಾರ ಪಡಿಸುವ ಮುನ್ನ ಎಂ.ಸಿ.ಎಂ.ಸಿ ಪ್ರಾಧಿಕಾರದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆಯಾಗದಂತೆ ತಡೆಯುವುದಕ್ಕಾಗಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸ್ಥಳೀಯ ಕೇಬಲ್ ಅಪರೇಟರ್ಸ್ ಮತ್ತು ನೆಟ್‍ವಕ್ ಸರ್ವೀಸ್ ಪ್ರೊವೈಡರ್ಸ್ ಗಳಿಗೆ ಸೂಕ್ತ ನಿರ್ದೇಶನ ನೀಡಲು ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2024 ರ ಸಾರ್ವತ್ರಿಕ ಲೋಕ ಸಭಾ ಚುನಾವಣೆಯು ಕೆಲವೇ ದಿನಗಳಲ್ಲಿ ಘೋಷಣೆ ನೀತಿ ಸಂಹಿತೆ ಜಾರಿಗೆಬರಲಿದೆ. ಚುನಾವಣಾ ಪ್ರಕ್ರಿಯೆಗೆ ಸಂಭಂದಿಸಿದ ಚಟುವಟಿಕೆಗಳಲ್ಲಿ ಭಾಗಿದರರಾಗಿರುವ ಪ್ರತಿಯೊಬ್ಬರೂ ಚುನಾವಣಾನೀತಿ ಸಂಹಿತೆ ಉಲ್ಲಂಘನೆ ಅಗದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಪ್ರಿಂಟಿಂಗ್ ಪ್ರೆಸ್ ಮಾಲೀಕರು ಕರಪತ್ರವನ್ನು ಮುದ್ರಿಸುವ ಮುನ್ನ ಕರಪತ್ರದಲ್ಲಿರುವ ಅಂಶಗಳವಿವರಗಳನ್ನು ಒಳಗೊಂಡ ಕರಡು ಕರಪತ್ರವನ್ನು ಮುದ್ರಿಸುವ ಮೂರುದಿನ ಪೂರ್ವದಲ್ಲಿಯೇ ಎಂ.ಸಿ.ಎಂ.ಸಿಗೆ ಸಲ್ಲಿಸಿ ಅನುಮತಿಪಡೆಯಬೇಕು. ಮುದ್ರಣದ ಕರಪತ್ರದಲ್ಲಿ ಮುದ್ರಕರ ಹೆಸರು, ಮುದ್ರಣದ ಸಂಖ್ಯೆಗಳನ್ನು ತಪ್ಪದೇ ನಮೂದಿಸಬೇಕು. ಮುದ್ರಣಕ್ಕೆ ತಗುಲುವ ವೆಚ್ಚವನ್ನು ಸಹ ನೀಡಬೇಕು ಎಂದರು.

ಕರಪತ್ರದಲ್ಲಿರುವ ವಿಷಯಗಳು ದ್ವೇಷ ಪೂರಿತ ವಾರಗಿರದೇ , ಇನ್ನೊಬ್ಬರನ್ನು ನಿಂದಿಸುವ ಮತ್ತು ಮಾನಹಾನಿ ಆಗುವುದು ಸೇರಿದಂತೆ ಮತ್ತಿತರ ನಿರ್ಬಂಧಿತ ವಿಷಯಗಳನ್ನು ಮುದ್ರಿಸಿ ಪ್ರಕಟಿಸಬಾರದು. ಇಂತಹ ಅಂಶಗಳು ಇದ್ದಲ್ಲಿ ಕರಪತ್ರದಲ್ಲಿ ಮುದ್ರಿಸಲು ಪೂರ್ವಾನುಮತಿ ನೀಡುವುದಿಲ್ಲ ಎಂದರು.

ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸುವ ಮುನ್ನ ಜಾಹೀರಾತು ವಿವರಗಳನ್ನು ಎಂ.ಸಿ.ಎಂ.ಸಿ ಸಮಿತಿಯ ಮುಂದೆ ನಿಗಧಿತನ ಮೂನೆಗಳಲ್ಲಿ ನೀಡಿ, ಪೂರ್ವಾನುಮತಿ ಪಡೆದು ಪ್ರಚಾರಪಡಿಸಬೇಕು. ಸಮಾಜದಲ್ಲಿ ಶಾಂತಿ ಕದಡುವುದು, ಇನ್ನೊಬ್ಬರನ್ನು ಅಪಮಾನಿಸುವುದು, ಯಾವುದೇ ಧರ್ಮವನ್ನು ಹೀಯಾಳಿಸುವುದು ಸೇರಿದಂತೆ ಮತ್ತಿತರ ನಿಯಮ ಉಲ್ಲಂಘಿಸ ದಂತಿರಬೇಕು ಎಂದರು.

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಕರಪತ್ರಗಳನ್ನು ಮುದ್ರಿಸುವುದು, ಜಾಹೀರಾತುಗಳನ್ನು ಪ್ರಚಾರಪಡಿಸುವುದು ಮಾಡಿದ್ದಲ್ಲಿ ಅಂತಹವರ ಮೇಲೆ ಆರ್.ಪಿಕಾಯ್ದೆಯಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನಿನಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಜಿಲ್ಲೆಯಲ್ಲಿ ನ್ಯಾಯಸಮ್ಮತ, ಶಾಂತಿಯುತ ಲೋಕಸಭಾ ಚುನಾವಣೆ ನಡೆಸಲು ಪ್ರತಿಯೊಬ್ಬರೂಸ ಹಕರಿಸಬೇಕು. ಚುನಾವಣಾ ಆಯೋಗ ನೀಡುವ ನಿರ್ದೇಶನಗಳು ಹಾಗೂ ನಿಯಮಗಳನ್ನು ಪಾಲಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಕೇಬಲ್ ನೆಟ್‍ವರ್ಕ್ ನ ವರದಿಗಾರರು, ಪ್ರಿಂಟಿಂಗ್ ಪ್ರೆಸ್ ನ ಮಾಲೀಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!