ಕಾಪು: 34 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ

ಕಾಪು ಮಾ.3 (ಉಡುಪಿ ಟೈಮ್ಸ್ ವರದಿ): ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ವ್ಯಾಪ್ತಿಯ ಫಲಾನುಭವಿಗಳಿಗೆ 94/C ಹಾಗೂ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಹಿರಿಯಡಕ ಗ್ರಾಮ ಪಂಚಾಯತ್ ನಲ್ಲಿ ವಿತರಿಸಿದರು.

ಸುಮಾರು 20 ಕ್ಕೂ ಅಧಿಕ ವರ್ಷಗಳಿಂದ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 20 ಫಲಾನುಭವಿಗಳು,ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ11 ಫಲಾನುಭವಿಗಳು, ಪೆರ್ಡೂರು ಗ್ರಾಮ ಪಂಚಾಯತ್ ವ್ವ್ಯಾಪ್ತಿಯ2 ಫಲಾನುಭವಿಗಳು,  80 ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 1 ಫಲಾನುಭವಿಗೆ ಸೇರಿದಂತೆ ಒಟ್ಟು 34 ಫಲಾನುಭವಿಗೆ 94/C ಹಾಗೂ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತಿ ಶೆಟ್ಟಿ, ಹರೀಶ್ ಸಾಲಿಯಾನ್, ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುರಂದರ ಕೋಟ್ಯಾನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚೇತನಾ ಶೆಟ್ಟಿ, ಉಪಾಧ್ಯಕ್ಷ ದೇವು ಪೂಜಾರಿ, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಕೋಟ್ಯಾನ್ ಹಾಗೂ ಗುರುರಾಜ್, ಹಾಗೂ ಕಂದಾಯ ನಿರೀಕ್ಷರು, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!