ಬೈಂದೂರು: ಪ್ರತ್ಯೇಕ ಜುಗಾರಿ ಅಡ್ಡೆಗೆ ದಾಳಿ- 6 ಮಂದಿ ವಶ

ಬೈಂದೂರು ಮಾ.7(ಉಡುಪಿ ಟೈಮ್ಸ್ ವರದಿ): ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಎರಡು ಪ್ರತ್ಯೇಕ ಜುಗಾರಿ ಅಡ್ಡೆಗೆ ದಾಳಿ ಮಾಡಿದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೈಂದೂರಿನ ಉಪ್ಪುಂದದ ಮೀನು ಮಾರ್ಕೆಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಮಟ್ಕಾ ಜುಗಾರಿ ಆಟದ  ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿತ ಅನಂತ ಎಂಬಾತನನ್ನು ವಶಕ್ಕೆ ಪಡೆದು ಆತನ ಕೈಯಲ್ಲಿದ್ದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ ನಗದು 540/- ರೂ. ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮತ್ತೊಂದೆಡೆ ನಾವುಂದ ಗ್ರಾಮದ ಹಾಡಿಯ ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು  ಜುಗಾರಿ ನಿರತರಾಗಿದ್ದ ನಾಗರಾಜ, ಮಹೇಶ, ಶಶಿ ಕುಮಾರ್, ಸಂದೀಪ , ರಾಘವೇಂದ್ರ ಎಂಬ ಐವರನ್ನು ವಶಕ್ಕೆ ಜುಗಾರಿ ಆಟಕ್ಕೆ ಉಪಯೋಗಿಸಿದ ಚಾರ್ಟ್ ಬ್ಯಾನರ್, ದಾಳಗಳು , ಪ್ಲಾಸ್ಟಿಕ್‌ಡಬ್ಬ, ಮೇಣದ ಬತ್ತಿ, ನಗದು ರೂಪಾಯಿ 1400/- ನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಎರಡೂ ಘಟನೆಗೆ ಸಂಬಂಧಿಸಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!