ಕಾಪು/ಬ್ರಹ್ಮಾವರ: ಅನಾರೋಗ್ಯದಿಂದ ಇಬ್ಬರು ಮೃತ್ಯು

ಕಾಪು ಮಾ.11(ಉಡುಪಿ ಟೈಮ್ಸ್ ವರದಿ): ಅನಾರೋಗ್ಯದಿಂದ ಅಸ್ವಸ್ಥ ಗೊಂಡು ಇಬ್ಬರು ವ್ಯಕ್ತಿಗಳು ಮೃತಪಟ್ಟ ಘಟನೆ ಕಾಪು ಹಾಗೂ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಪು ಠಾಣಾ ವ್ಯಾಪ್ತಿಯ ಪ್ರಶಾಂತ ಪೂಜಾರಿ (44) ಎಂಬವರು ಇಂದು ಬೆಳಿಗ್ಗೆ ಮನೆಯಲ್ಲಿರುವಾಗ ಎದೆನೋವು ಕಾಣಿಸಿಕೊಂಡು ಅಸ್ವಸ್ಥ ಗೊಂಡಿದ್ದರು. ತಕ್ಷಣ ಅವರನ್ನು ಮನೆಯವರು ಉಡುಪಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ  ವೈದ್ಯರು ಪ್ರಶಾಂತ ಪೂಜಾರಿಯನ್ನು ಪರೀಕ್ಷಿಸಿ ಅವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. 

ಮತ್ತೊಂದೆಡೆ  ಬ್ರಹ್ಮಾವರದ ಹೇರೂರಿನಲ್ಲಿರುವ ಸ್ನೇಹಾಲಯ ವೃದ್ದಾಶ್ರಮದ ಆಶ್ರಿತರಾಗಿದ್ದ ನಾರಾಯಣ ಕೆ. ಎಂ ಅವರು ನಿನ್ನೆ ರಾತ್ರಿ  ತೀವ್ರ ತರಹದ ಹೊಟ್ಟೆ ನೋವು ಕಾಣಿಸಿಕೊಂಡು ಅಸ್ವಸ್ಥ ಗೊಂಡಿದ್ದರು.  ಕೂಡಲೇ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ  ವೈದ್ಯರು ಪರೀಕ್ಷಿಸಿ ನಾರಾಯಣ ಕೆ. ಎಂ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಎರಡೂ ಘಟನೆಗೆ ಸಂಬಂಧಿಸಿ ಕಾಪು ಹಾಗೂ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!