ಪಡುಬಿದ್ರೆ: ವ್ಯಕ್ತಿ ಆತ್ಮಹತ್ಯೆ
![](https://udupitimes.com/wp-content/uploads/2022/10/suicide2.jpg)
ಪಡುಬಿದ್ರಿ ಮಾ.20(ಉಡುಪಿ ಟೈಮ್ಸ್ ವರದಿ): ಕಾಪುವಿನ ಬಡಾ ಗ್ರಾಮದ ಉಚ್ಚಿಲದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸ್ಥಳೀಯ ನಿವಾಸಿ ಚಂದ್ರಶೇಖರ (62) ಆತ್ಮಹತ್ಯೆ ಮಾಡಿಕೊಂಡವರು. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ರಾತ್ರಿಯಿಂದ ಇಂದು ಬೆಳಗ್ಗಿನ ಮಧ್ಯಾವಧಿಯಲ್ಲಿ ಕಾಪು ಬಡಾ ಗ್ರಾಮ ಉಚ್ಚಿಲ ಎಂಬಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.