ಕೊರಂಗ್ರಪಾಡಿ: ಕಾರು ಡಿಕ್ಕಿ- ಸ್ಕೂಟರ್ ಸವಾರ ಮೃತ್ಯು
![](https://udupitimes.com/wp-content/uploads/2024/03/IMG_20240330_085248.jpg)
ಉಡುಪಿ : ಕಾರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಾ.29ರಂದು ನಸುಕಿನ ವೇಳೆ ಒಂದು ಗಂಟೆ ಸುಮಾರಿಗೆ ಕೊರಂಗ್ರಪಾಡಿ ಜಂಕ್ಷನ್ ಬಳಿ ನಡೆದಿದೆ.
ಮೃತರನ್ನು ಕೊರಂಗ್ರಪಾಡಿಯ ವಿಕ್ರಮ(28) ಎಂದು ಗುರುತಿಸಲಾಗಿದೆ. ಕೊರಂಗ್ರಪಾಡಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರ ಕಡೆಗೆ ಹೋಗುತ್ತಿದ್ದ ಕಾರು, ಎದುರುಗಡೆಯಿಂದ ಬರುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದಿದೆ. ಇದರಿಂದ ಸವಾರ ವಿಕ್ರಮ ಸ್ಕೂಟರ್ ಸಮೇತ ರಸ್ತೆಗೆ ಬಿದ್ದರು. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು, ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.