ದೇಶದಲ್ಲಿ ಕಾಂಗ್ರೆಸ್ ಮುಳುಗುವ ಹಡಗು. ತಾಕತ್ತಿದ್ದರೆ ರಾಜ್ಯದಲ್ಲಿ ತಮ್ಮ ಪಕ್ಷ ಗೆಲ್ಲುವ ಕ್ಷೇತ್ರಗಳ ಹೆಸರು ಹೇಳಲಿ: ಬಿಎಸ್‌ವೈ ಸವಾಲು

ದಾವಣಗೆರೆ ಎ.15: ದೇಶದಲ್ಲಿ ಕಾಂಗ್ರೆಸ್ ಮುಳುಗುವ ಹಡಗು. ತಾಕತ್ತಿದ್ದರೆ ರಾಜ್ಯದಲ್ಲಿ ತಮ್ಮ ಪಕ್ಷ ಗೆಲ್ಲುವ ಒಂದೆರಡು ಕ್ಷೇತ್ರಗಳ ಹೆಸರು ಹೇಳಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸವಾಲು ಹಾಕಿದ್ದಾರೆ.

ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತ್ಯಾವಣಗಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ. ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗಲಿದೆ. ಕಾಂಗ್ರೆಸ್ ಇಷ್ಟು ವರ್ಷ ಹಣ, ಹೆಂಡ, ತೋಳ್ಬಲ, ಅಧಿಕಾರ ಬಲದಿಂದ ಜಾತಿಯ ವಿಷ ಬೀಜ ಬಿತ್ತಿ ಅಧಿಕಾರಕ್ಕೆ ಬರುತ್ತಿದೆ. ಆದರೆ, ಈಗ ಕಾಂಗ್ರೆಸ್ ಆಟ ನಡೆಯುವುದಿಲ್ಲ ಎಂದು ಹೇಳಿದರು.

ಹಾಗೂ ಜನ ಬುದ್ಧಿವಂತರಾಗಿದ್ದಾರೆ. ಮೋದಿಜೀ ಅವರ ಆಡಳಿತ ಮೆಚ್ಚಿಕೊಂಡಿದ್ದಾರೆ ಎಂದರು. ಈ ಬಾರಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಮೈತ್ರಿ ಅಭ್ಯರ್ಥಿಗಳು ಗೆಲ್ಲುವುದು, ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆಗುವುದು ನಿಶ್ಚಿತ ಎಂದರು.

Leave a Reply

Your email address will not be published. Required fields are marked *

error: Content is protected !!