ಉಡುಪಿ: ಅನಾರೋಗ್ಯದಿಂದ ಅಸ್ವಸ್ಥಗೊಂಡು ರಿಕ್ಷಾ ಚಾಲಕ ಮೃತ್ಯು

ಉಡುಪಿ ಎ.20(ಉಡುಪಿ ಟೈಮ್ಸ್ ವರದಿ) : ಅನಾರೋಗ್ಯದಿಂದ ಅಸ್ವಸ್ಥಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಉಡುಪಿಯಲ್ಲಿ ನಡೆದಿದೆ.

ಉಡುಪಿಯಲ್ಲಿ ಆಟೋ ಚಾಲಕರಾಗಿದ್ದ ಉದ್ಯಾವರದ  ಪ್ರಕಾಶ್ (48) ಮೃತಪಟ್ಟವರು.

ಉಡುಪಿಯ ಸಿಂಡಿಕೇಟ್ ಟವರ್‌ ಹತ್ತಿರದ ಆಟೋ ರಿಕ್ಷಾ ನಿಲ್ದಾಣದಲ್ಲಿ ರಿಕ್ಷಾ ಬಾಡಿಗೆಯನ್ನು ಓಡಿಸುತ್ತಿದ್ದ ಪ್ರಕಾಶ್ ರವರು ಇಂದು ಎಂದಿನಂತೆ ಕೆಲಸದಲ್ಲಿರುವಾಗ ತೀವ್ರ ಅಸ್ವಸ್ಥಗೊಂಡಿದ್ದರು. ಈ ವೇಳೆ ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ  ಪರೀಕ್ಷಿಸಿದ ವೈದ್ಯರು  ಹೆಚ್ಚಿನ ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಶಿಫಾರಸ್ಸು ಮಾಡಿದ್ದರು. ಅದರಂತೆ ಪ್ರಕಾಶ್ ಅವರನ್ನು ಮಧ್ಯಾಹ್ನದ ವೇಳೆ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಪ್ರಕಾಶ್ ರವರು ಈಗಾಗಲೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮೃತ ಪ್ರಕಾಶ್ ರವರ ಅಣ್ಣ ನೀಡಿದ ದೂರಿನಂತೆ  ಉಡುಪಿ ನಗರ  ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!