ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ-ಯಶ್‍ಪಾಲ್ ಸುವರ್ಣ

ಉಡುಪಿ ಏ.24(ಉಡುಪಿ ಟೈಮ್ಸ್ ವರದಿ): ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಿ ಎಂದು ಶಾಸಕ ಯಶ್‍ಪಾಲ್ ಸುವರ್ಣ ಅವರು ಮತದಾರರಲ್ಲಿ ಕೇಳಿಕೊಂಡಿದ್ದಾರೆ.

ಇಂದು ಉಡುಪಿಯ ನರ್ಮ್ ಬಸ್ ನಿಲ್ದಾಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕೋಟ ಶ್ರೀನಿವಾಸ ಪೂಜಾರಿಯವರು ಜಿಲ್ಲೆಯ ಸಾಮಾನ್ಯ ಜನರ ಸಮಸ್ಯೆಗೆ ಸ್ಪಂದಿಸಿ ಅವರ ವಿಶ್ವಾಸವನ್ನುಗಳಿಸಿದ್ದಾರೆ. ಇಂದು ಚುನಾವಣೆ ಸಲುವಾಗಿ ಮತ ಪ್ರಚಾರಕ್ಕೆ ಜಿಲ್ಲೆಯ ಮೂಲೆ ಮೂಲೆಗೂ ಹೋಗುವಾಗ ಎಲ್ಲರೂ ಅವರನ್ನು ಸ್ವಾಗತಿಸಿ ಆಶಿರ್ವದಿಸುತ್ತಾರೆ ಎಂದರೆ ಅದು ಶ್ರೀನಿವಾಸ ಪೂಜಾರಿ ಅವರು ಸಾಮಾನ್ಯ ವರ್ಗದವರ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಿರುವುದು ತಿಳಿಯುತ್ತದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ತಮ್ಮ ಕರ್ತವ್ಯವನ್ನ ಜವಾಬ್ದಾರಿಯುವತಾಗಿ ನಿರ್ವಸಲು ಮತದಾರರು ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮತ ಹಾಕುವ ಮೂಲಕ ಗೆಲ್ಲಿಸಬೇಕು ಎಂದು ಕೇಳಿಕೊಂಡರು.

ಇದೇ ವೇಳೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಈ ಚುನಾವಣೆಯು ದೇಶದ ಗಡಿ ಭದ್ರಗೊಳಿಸಿ ದೇಶದೊಳಗೆ ಇರುವ ಪ್ರಜೆಗಳಿಗೆ ನೆಮ್ಮದಿಯ ಬದುಕು ಕಟ್ಟಿ ಕೊಡಲು ಸಮರ್ಥರಾದವರ ಕೈಗೆ ಅಧಿಕಾರ ಕಟ್ಟಿಕೊಡುವ ಚುನಾವಣೆಯಾಗಿದೆ. ಭಾರತದ ಆರ್ಥಿಕತೆಯನ್ನು ಸಮತೋಲನದಲ್ಲಿ ಇಟ್ಟು ಸಮರ್ಥವಾಗಿ ನಿಭಾಯಿಸುವ ಪ್ರಧಾನಿಗೆ ಅಧಿಕಾರ ನೀಡುವಂತಹ ಚುನಾವಣೆಯಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!