ಕುಂದಾಪುರ: ಚಲಿಸುವ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಕುಂದಾಪುರ ಏ.24(ಉಡುಪಿ ಟೈಮ್ಸ್ ವರದಿ):ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಟ್ಟಿಯಂಗಡಿ ಗ್ರಾಮದ ಪಾರ್ತಿಕಟ್ಟೆ ಎಂಬಲ್ಲಿರುವ ರೈಲ್ವೆ ಹಳಿಯಲ್ಲಿ ನಡೆದಿದೆ.

ಜಯಂತ್‌ (38) ಆತ್ಮಹತ್ಯೆ ಮಾಡಿಕೊಂಡವರು.

ಹೈದ್ರಾಬಾದ್‌ನಲ್ಲಿ ಹೊಟೇಲ್‌ ಕೆಲಸ ಮಾಡಿಕೊಂಡಿದ್ದ ಇವರು ಇತ್ತೀಚಿಗೆ ಊರಿಗೆ ಬಂದಿದ್ದರು. ಇವರು ನಿನ್ನೆ ರಾತ್ರಿಯಿಂದ  ಇಂದು ಬೆಳಗ್ಗಿನ  ನಡುವಿನ ಅವಧಿಯಲ್ಲಿ ಕುಂದಾಪುರದ ಹಟ್ಟಿಯಂಗಡಿ ಗ್ರಾಮದ ಪಾರ್ತಿಕಟ್ಟೆ ಎಂಬಲ್ಲಿರುವ ರೈಲ್ವೆ ಟ್ರ್ಯಾಕ್‌ನಲ್ಲಿ ಚಲಿಸುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!