ಪರಿಸ್ಥಿತಿ ಕೈ ಮೀರುತ್ತಿದೆ, ಸೋಂಕಿನ ಲಕ್ಷಣ ಕಂಡು ಬಂದ ಕೂಡಲೇ ಟೆಸ್ಟ್ ಮಾಡಿಸಿ: ಉಡುಪಿ ಜಿಲ್ಲಾಧಿಕಾರಿ ಮನವಿ

ಉಡುಪಿ(ಉಡುಪಿ ಟೈಮ್ಸ್ ವರದಿ): ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಐಸಿಯು ಭರ್ತಿಯಾದ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಪರಿಸ್ಥಿತಿ ಕೈಮೀರುವ ಹಂತದಲ್ಲಿರುವ ಸಂದರ್ಭದಲ್ಲಿ ಜಿಲ್ಲೆಯ ಜನರಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಮನವಿ ಮಾಡಿ ಫೇಸ್ಬುಕ್ ಮೂಲಕ ವಿಡಿಯೋ ಸಂದೇಶ ನೀಡಿದ್ದು ಸೋಂಕಿನ ಲಕ್ಷಣ ಕಂಡು ಬಂದ ಕೂಡಲೇ ಟೆಸ್ಟ್ ಮಾಡಿಸುವಂತೆ ಸಾರ್ವಜನಿಕರಲ್ಲಿ ವಿನಂತಿ ಮಾಡಿದ್ದಾರೆ.

ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ.ಇಂತಹ ಸಂದರ್ಭದಲ್ಲಿ ಸೋಂಕಿನ ಲಕ್ಷಣ ಇರುವವರು ನಿರ್ಲಕ್ಷ್ಯ ಮಾಡಬಾರದು. ಲಕ್ಷಣ ಇದ್ದರೂ ಹತ್ತು ಹದಿನೈದು ದಿನ ಮನೆಯಲ್ಲೇ ಇದ್ದು ಕೊರೋನಾ ಉಲ್ಬಣಿಸಿದ ಬಳಿಕ ನೇರ ಐಸಿಯೂಗೆ ಬರುವವರ ಸಂಖ್ಯೆ ಹೆಚ್ಚುತ್ತಲೆ ಇದೆ ತಕ್ಷಣ ಬಂದು ಟೆಸ್ಟ್ ಮಾಡಿಸಿ ಎಂದು ಮನವಿ ಮಾಡಿದ್ದಾರೆ.

ಸಂಬಂದಿಕರು ಮತ್ತು ಬಂಧುಗಳೇ ಮನೆಗೆ ಬಂದರೂ ಸಾಮಾಜಿಕ ಅಂತರ ಪಾಲಿಸಬೇಕು. ಈ ಸಮಯದಲ್ಲಿ ಸಂಬಂಧಿಕರು ಮನೆಯಲ್ಲಿದ್ದರೂ ಐಸೊಲೇಷನ್ ನಲ್ಲಿರಲಿ. ಮನೆಯ ಒಬ್ಬರಿಗೆ ಬಂದರೆ ಎಲ್ಲರಿಗೂ ಸೋಂಕು ಹರಡುತ್ತದೆ. ಇದರಿಂದ ಸಮಸ್ಯೆ ಬಿಗಡಾಯಿಸುತ್ತದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!