ಕುಂದಾಪುರ/ಮಣಿಪಾಲ: ನೇಣು ಬಿಗಿದು ವ್ಯಕ್ತಿಗಳಿಬ್ಬರು ಆತ್ಮಹತ್ಯೆ

ಕುಂದಾಪುರ ಮಣಿಪಾಲ ಮೇ 17(ಉಡುಪಿ ಟೈಮ್ಸ್ ವರದಿ): ನೇಣು ಬಿಗಿದು ವ್ಯಕ್ತಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕುಂದಾಪುರ ಠಾಣಾ ವ್ಯಾಪ್ತಿಯ ಕಾವ್ರಾಡಿ ಗ್ರಾಮದ ಸದಾಶಿವ (33) ಹಾಗೂ ಮಣಿಪಾಲದ ಶಿವಳ್ಳಿ ಗ್ರಾಮದ ಶಶಾಂಕ್ (69) ಆತ್ಮಹತ್ಯೆ ಮಾಡಿಕೊಂಡವರು.

ಬೆಂಗಳೂರಿನ ಖಾಸಾಗಿ ಕಂಪೆನಿಯೊಂದರಲ್ಲಿ ಅಸಿಸ್ಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದ ಕುಂದಾಪುರದ ಸದಾಶಿವ ಅವರು ಇತ್ತೀಚಿಗೆ ವರ್ಕ್ ಫ್ರಮ್ ಹೋಂ ಆಗಿ ಕೆಲಸ ಮಾಡಿಕೊಂಡಿದ್ದರು. ಇಂದು ಬೆಳಿಗ್ಗೆ ಸದಾಶಿವರವರು ಬಾವಿಯ ರಾಟೆ ಕಟ್ಟುವ ಕಬ್ಬಿಣದ ದಂಡೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದೆಡೆ ಮಣಿಪಾಲದಲ್ಲಿ ಸಾಲದ ಚಿಂತೆಯಿಂದ ಶಶಾಂಕ್ ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!