ಬ್ರಹ್ಮಾವರ: ವ್ಯಕ್ತಿ ನಾಪತ್ತೆ

ಬ್ರಹ್ಮಾವರ ಮೇ 17(ಉಡುಪಿ ಟೈಮ್ಸ್ ವರದಿ):  ಮನೆಯಿಂದ ಹೋದ ವ್ಯಕ್ತಿಯೊಬ್ಬರು ವಾಪಸ್ಸು ಬಾರದೆ ನಾಪತ್ತೆಯಾಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬ್ರಹ್ಮಾವರದ ಯಡ್ತಾಡಿ ಗ್ರಾಮದ ನರಸಿಂಹ (78) ನಾಪತ್ತೆಯಾಗಿರುವವರು. ಇವರಿಗೆ ನೆನಪಿನ ಶಕ್ತಿ ಕಮ್ಮಿಯಾಗಿದ್ದು, ಆಗಾಗ ಮನೆ ಬಿಟ್ಟು ಹೋಗಿ ಎರಡು ದಿನಗಳ ನಂತರ ಮನೆಗೆ ಬರುತ್ತಿದ್ದರು, ಆದರೆ ಮೇ 6 ರಂದು ಮಧ್ಯಾಹ್ನದ ವೇಳೆ ಮನೆಯಿಂದ ಹೋದವರು ಇದುವರೆಗೂ ಮನೆಗೆ ಬಾರದೇ ಕಾಣೆಯಾಗಿದ್ದಾರೆ ಎಂಬುದಾಗಿ ನಾಪತ್ತೆಯಾಗಿರುವವರ ಮಗ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!