ಉಡುಪಿ: ತಡರಾತ್ರಿ ಪೆಟ್ರೋಲ್ ಹಾಕದಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ

ಉಡುಪಿ, ಮೇ. 18: ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಪೆಟ್ರೋಲ್ ಬಂಕ್ ಒಂದರಲ್ಲಿ ನಡೆದಿದೆ.

ಪ್ರದೀಪ್ ಕುಮಾರ್ (26) ಹಲ್ಲೆಗೆ ಒಳಗಾದ ಬಂಕ್ ಸಿಬ್ಬಂದಿ.

ಮಧ್ಯರಾತ್ರಿ ಪೆಟ್ರೋಲ್ ಹಾಕಲು ಎರಡು ಬೈಕ್ ಗಳಲ್ಲಿ ಯುವಕರ ಬಂಕ್ ಗೆ ಬಂದಿದ್ದರು. ಈ ವೇಳೆ ಯುವಕರು ಪೆಟ್ರೋಲ್ ಹಾಕಲು ಹೇಳಿದಾಗ ಬಂಕ್ ಬಂದ್ ಆಗಿದೆ ಎಂದು ಸಿಬ್ಬಂದಿ ಹೇಳಿದ್ದಾರೆ. ಇದರಿಂದ ಕೋಪಗೊಂಡ ಯುವಕನೋರ್ವ ಸಿಬ್ಬಂದಿ ಪ್ರದೀಪ್ ಕುಮಾರ್ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಘಟನೆಯಿಂದ ಹಲ್ಲೆಗೊಳಗಾದ ಪ್ರದೀಪ್ ಕುಮಾರ್ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!