ಪದವೀಧರರ ಕ್ಷೇತ್ರದ ಚುನಾವಣೆ- ಪಕ್ಷೇತರ ಅಭ್ಯರ್ಥಿಯಾಗಿ ಎಸ್.ಪಿ ದಿನೇಶ್ ಸ್ಪರ್ಧೆ

ಉಡುಪಿ ಮೇ 20(ಉಡುಪಿ ಟೈಮ್ಸ್ ವರದಿ): ವಿಧಾನ ಪರಿಷತ್‌ನ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನ್ಯಾಯವಾದಿ ಎಸ್.ಪಿ ದಿನೇಶ್ ಅವರು 3 ನೇ ಬಾರಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಇಂದು ಉಡುಪಿಯ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಅವರು, ಪಕ್ಷ ಸಂಘಟನೆಗೆ ಶ್ರಮಿಸಿ ಸಹಕರಿಸಿದ ತಮ್ಮನ್ನು ನಿರಾಕರಿಸಿ ಬೇರೆ ಪಕ್ಷದಿಂದ ಬಂದ ವ್ಯಕ್ತಿಗೆ ಟಿಕೇಟ್ ನೀಡಿದರ ವಿರೋಧವಾಗಿ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಎರಡು ಬಾರಿ ಅಲ್ಪ ಮತಗಳ ಅಂತರದಿಂದ ಸೋಲು ಕಂಡಿದ್ದು, ಈ ಬಾರಿ ಮೂರನೇ ಬಾರಿ ಮತ್ತೆ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಮತದಾರರು ತಮ್ಮ ಬೆಂಬಲ ನಿಲಗಲುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಮತದಾರರಲ್ಲಿ ತಮ್ಮನ್ನು ಗೆಲ್ಲಿಸುವಂತೆ ಕೋರಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!