ಹರೀಶ್ ಪೂಂಜಾ ವಿರುದ್ದ ಎಫ್.ಐ.ಆರ್- ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದಿಂದ ಬ್ರಹತ್ ಪ್ರತಿಭಟನೆ

ಉಡುಪಿ ಮೇ.23(ಉಡುಪಿ ಟೈಮ್ಸ್ ವರದಿ): ಬೆಳ್ತಂಗಡಿ ಶಾಸಕ ಯುವಮೋರ್ಚಾ ರಾಜ್ಯ ಪ್ರಧಾನಕಾರ್ಯದರ್ಶಿ ಹರೀಶ್ ಪೂಂಜಾ ಅವರ ವಿರುದ್ದ ಎಫ್.ಐ.ಆರ್ ದಾಖಲಿಸಿರುವುದರ ವಿರುದ್ದ ಅಜ್ಜರಕಾಡು ಹುತಾತ್ಮ ಯೋದರ ಸ್ಮಾರಕದ ಎದುರು ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ನಡೆಸಲಾಯಿತು.

ಈ ಪ್ರತಿಭಟನೆ ಅದ್ಯಕ್ಷತೆ ವಹಿಸಿ ಮಾತನಾಡಿದ ಯುವಮೋರ್ಚಾ ಜಿಲ್ಲಾದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದ ದಿನಂದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ಸುಳ್ಳು ಕೇಸುಗಳನ್ನು ದಾಖಲಿಸಿ ದೌರ್ಜನ್ಯ ಮಾಡಲಾಗುತ್ತಿದೆ. ಈಗ ಕಾರ್ಯಕರ್ತರ ರಕ್ಷಣೆಗೆ ಬಂದ ಬೆಳ್ತಂಗಡಿ ಶಾಸಕರ ಮೇಲೆ ಸುಳ್ಳು ಕೇಸ್ ದಾಖಲಿಸಿ ಅವರನ್ನು ಬಂದಿಸುವ ಹುನ್ನಾರ ನಡೆದಿದ್ದು ಮುಂದೆ ಇಂತಹ ಘಟನೆ ನಡೆದಲ್ಲಿ ಯುವಮೋರ್ಚಾ ರಸ್ತೆಗಿಳಿದು ಹೋರಾಟ ಮಾಡಲಿದೆ ಎಂದರು.

ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ವಿಕ್ಯಾತ್ ಶೆಟ್ಟಿ ಅವರು ಮಾತನಾಡಿ, ಅಧಿಕಾರಕ್ಕೆ ಬಂದು 1 ವರ್ಷದಲ್ಲಿ 100 ಮೀಟರ್ ರಸ್ತೆ ಮಾಡದ ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ಶಣೈ, ಯುವಮೋರ್ಚಾ ಪ್ರಧಾನಕಾರ್ಯದರ್ಶಿ ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ, ಉಪಾದ್ಯಕ್ಷರಾದ ಸಚಿನ್,ಪ್ರಸಾದ್ ಬಿಲ್ಲವ, ಅರ್ಜುನ್ ಪ್ರಭು, ಯುವಮೋರ್ಚಾ ಮಂಡಲ ಅದ್ಯಕ್ಷರುಗಳಾದ ಕಿರಣ್ ಪೂಜಾರಿ ತೆಕ್ಕಟ್ಟೆ, ಗಜೇಂದ್ರ ಎಸ್.ಬಿ, ಸೋನು ಪೂಜಾರಿ ಪಾಂಗಳ, ಶ್ರೀವತ್ಸ ಉಡುಪಿ , ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಪ್ರದೀಪ್ ಕುಂದರ್, ಪ್ರವೀಣ್ ಸೋಮಯ್ಯ, ಮಹಿಳಾ ಮೋರ್ಚಾ ಪ್ರಮುಖರಾದ ನಳಿನಿ ಪ್ರದೀಪ್ , ಮಹಿಳಾ ಮೋರ್ಚಾ ಅದ್ಯಕ್ಷೆ ಅಶ್ವಿನಿ ಶೆಟ್ಟಿ, ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ ವಿವಿಧ ಮಂಡಲದ ಯುವಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!