ಉಡುಪಿ: ಹೃದಯಾಘಾತಕ್ಕೆ ಯುವಕ ಬಲಿ

ಶಿರ್ವ ಮೇ 24(ಉಡುಪಿ ಟೈಮ್ಸ್ ವರದಿ): ಶಂಕರಪುರ ಸಮೀಪದ ಸರ್ಕಾರಿಗುಡ್ಡೆಯಲ್ಲಿ 18 ವರ್ಷದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಸರ್ಕಾರಿಗುಡ್ಡೆ ನಿವಾಸಿ ಕಾರ್ತಿಕ್ ಪೂಜಾರಿ (18) ಮೃತಪಟ್ಟ ಯುವಕ. ಕಾಪು ಮತ್ತು ಕಟಪಾಡಿ ವಲಯದ ಕಟ್ಟಡ ಸಾಮಾಗ್ರಿ ಸಾಗಾಟ ಲಾರಿ, ಟೆಂಪೋ ಮಾಲಕರ ಸಂಘದ ಅಧ್ಯಕ್ಷ, ಸಮಾಜಸೇವಕ ಚಂದ್ರ ಪೂಜಾರಿ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಶಾಲಿನಿಚಂದ್ರ ದಂಪತಿಗಳ ಪುತ್ರರಾದ ಕಾರ್ತಿಕ್ ಅವರು ಹೃದಯ ಸಂಬಂಧಿ ಅನಾರೋಗ್ಯ ಸಮಸ್ಯೆಯಿಂದ ಬಳಲುತಿದ್ದು, ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!