ಉದ್ಯಾವರ: ಎಸ್.ಡಿ.ಎಂ ಕಾಲೇಜಿಗೆ ಡಾ.ಧನಂಜಯ ಸರ್ಜಿ ಮತ್ತು ಭೋಜೇಗೌಡ ಭೇಟಿ

ಉಡುಪಿ ಮೇ 25(ಉಡುಪಿ ಟೈಮ್ಸ್ ವರದಿ):  ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಉದ್ಯಾವರದ ಪ್ರತಿಷ್ಠಿತ ಎಸ್ ಡಿಎಂ ಆಯುರ್ವೇದ ಕಾಲೇಜಿಗೆ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿಗಳಾದ ಡಾ ಧನಂಜಯ ಸರ್ಜಿ ಮತ್ತು ಎಸ್ ಎಲ್ ಭೋಜೇಗೌಡರು ಭೇಟಿ ನೀಡಿದರು.

ಈ ವೇಳೆ ತಮ್ಮನ್ನು ಬೆಂಬಲಿಸಿ  ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ಲಾಲಾಜಿ ಮಂಡಲ್ , ಕಾಲೇಜಿನ ಪ್ರಾಂಶುಪಾಲರಾದ ಮಮತಾ ಸೇರಿದಂತೆ ಕಾಲೇಜಿನ ಆಡಳಿತವರ್ಗ ,ಉಪನ್ಯಾಸಕರು , ಸಿಬ್ಬಂದಿವರ್ಗ ಮತ್ತು ಪದವೀಧರ ಮತದಾರರು, ಸ್ಥಳೀಯ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!