ಜನತಾ ಕರ್ಫ್ಯೂ ಯಶಸ್ವಿಯಾಗಿಲ್ಲ, ಮೇ. 12ರ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು : ಡಾ. ಸುಧಾಕರ್

ಬೆಂಗಳೂರು ಮೇ.6 :ನಿರೀಕ್ಷಿಸಿದಂತೆ ಜನತಾ ಕರ್ಫ್ಯೂ ಯಶಸ್ವಿಯಾಗಿಲ್ಲ  ಈ ಹಿನ್ನೆಲೆಯಲ್ಲಿ ಮೇ. 12ರ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ  ಡಾ. ಸುಧಾಕರ್ ಹೇಳಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು, ಕೊರೋನಾ ಹರಡುವುದನ್ನು ತಡೆಗಟ್ಟಬೇಕಿದೆ. 14 ದಿನಗಳಲ್ಲಿ ಚೈನ್ ಬ್ರೇಕ್ ಮಾಡಬಹುದಾಗಿದೆ.

ಆದರೆ ನಿರೀಕ್ಷಿಸಿದಂತೆ ಜನತಾ ಕರ್ಫ್ಯೂ ಯಶಸ್ವಿಯಾಗಿಲ್ಲ. ಮೂಲಭೂತ ಸೌಕರ್ಯ ಹೆಚ್ಚಿಸಲು ಒಮ್ಮೆಲೆ ಸಾಧ್ಯವಿಲ್ಲ. ಪರಿಸ್ಥಿತಿ ನೋಡಿಕೊಂಡು ಸಿಎಂ ಜೊತೆ ಚರ್ಚಿಸಿ ಮೇ 12 ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.ಇನ್ನು ಮೇ 15 ರ ನಂತರ ಲಸಿಕೆ ರಾಜ್ಯಕ್ಕೆ ಬರಲಿದೆ ಎಂದ ಅವರುಸಾವಿನ ಪ್ರಮಾಣ ಕಡಿಮೆ ಮಾಡಲು ನಿರತರಾಗಿದ್ದೇವೆ. 18 ರಿಂದ 44 ವರ್ಷದವರಿಗೆ ಹೆಚ್ಚು ಲಸಿಕೆ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!