ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸುತ್ತು ಪೌಳಿಗೆ ಶಿಲಾನ್ಯಾಸ

ಉಡುಪಿ ಮೇ.8 (ಉಡುಪಿ ಟೈಮ್ಸ್ ವರದಿ) : ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸುತ್ತು ಪೌಳಿಗೆ ಶಿಲಾನ್ಯಾಸ ಕಾರ್ಯ ಕ್ರಮ ಇತ್ತೀಚೆಗೆ ನಡೆಯಿತು. ಈ ಶಿಲಾನ್ಯಾಸ ಕಾರ್ಯವನ್ನು ಉಡುಪಿಯ ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ನೆರವೇರಿಸಿ ಆಶಿರ್ವಚನ ನೀಡಿದರು.

ಈ ವೇಳೆ ಜೀರ್ಣೋದ್ಧಾರ ವಿಜ್ಞಾಪನಾ ಪತ್ರ ವನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರು ನೆರವೇರಿಸಿದರು, ಶ್ರೀ ಕೃಷ್ಣ ಮುಖ್ಯಪ್ರಾಣ ಅಸೋಸಿಯೇಟ್ಸ್ ಪ್ರೈವೇಟ್ ಲಿಮಿಟೆಡ್ ನ ರಮೇಶ್ ಬೈಲಕೆರೆರವರು ಕರಸೇವಕರಿಗೆ ಕೊಡಮಾಡಿದ ಟಿಶರ್ಟನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ನಾಗೇಶ್ ಹೆಗ್ಡೆ ಅವರು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿ ಅಧ್ಯಕ್ಷ ಡಾ. ರವಿರಾಜ್ ಆಚಾರ್ಯ, ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ ಅಂಚನ್, ನಗರಸಭಾ ಸದಸ್ಯೆ ಗೀತಾ ಶೇಟ್, ಪ್ರಧಾನ ತಂತ್ರಿಗಳಾದ ಪಾಡಿಗಾರು ಶೀನಿವಾಸ ತಂತ್ರಿ, ಅರ್ಚಕರಾದ ಕೆ .ರಘುಪತಿ ಉಪಾಧ್ಯಾಯ, ದೇವಸ್ಥಾನದ ಪವಿತ್ರಪಾಣಿ ಕುಂಜಿತ್ತಾಯ ಶ್ರೀನಿವಾಸ ಉಪಾಧ್ಯಾಯ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಗಳಾದ ಸಗ್ರಿ ಗೋಪಾಲಕೃಷ್ಣ ಸಾಮಗ, ನಾಗರಾಜ ಶೆಟ್ಟಿ, ರಮೇಶ್ ಶೇರಿಗಾರ್ , ಭಾಸ್ಕರ್ ಶೇರಿಗಾರ್, ವಸಂತರಾವ್ , ಪದ್ಮಾ ರತ್ನಾಕರ್, ಭಾರತಿ ಚಂದ್ರಶೇಖರ್, ವ್ಯವಸ್ಥಾಪನ ಮಂಡಳಿಯ ಸದಸ್ಯರು ಮತ್ತು ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!