ಅಮಾಸೆಬೈಲು: ಅನಾರೋಗ್ಯದ ಕಾರಣ- ಶಿಕ್ಷಕಿ ಆತ್ಮಹತ್ಯೆ

ಅಮಾಸೆಬೈಲು ಜೂ.12 (ಉಡುಪಿ ಟೈಮ್ಸ್ ವರದಿ): ತಮಗಿದ್ದ ಅನಾರೋಗ್ಯದ ಕಾರಣ ಶಿಕ್ಷಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮಾಸೆಬೈಲ್ ಠಾಣಾ ವ್ಯಾಪ್ತಿಯ ಹೊಸಂಗಡಿ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಸವಿತಾ (40) ಆತ್ಮಹತ್ಯೆ ಮಾಡಿಕೊಂಡವರು. ಕೆಪಿಸಿ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಕೆಲಸಮಾಡಿಕೊಂಡಿದ್ದ ಅವರು ಚಿಕ್ಕಂದಿನಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಅದಕ್ಕಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಇದೇ ಕಾರಣದಿಂದ ಅಥವಾ ಇನ್ನಾವುದೋ ಕಾರಣಕ್ಕಾಗಿ ಮನನೊಂದು ತಾವು ವಾಸವಿದ್ದ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!