ಅಜೆಕಾರು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಅಜೆಕಾರು ಜೂ.12 (ಉಡುಪಿ ಟೈಮ್ಸ್ ವರದಿ): ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಕಾರ್ಕಳದ ಹೆರ್ಮುಂಡೆ ಗ್ರಾಮದ ತೋಡಿನಲ್ಲಿ ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳೀಯ ನಿವಾಸಿ ಸಾಧು (74) ಮೃತಪಟ್ಟವರು. ಇವರು ಮನೆಯಿಂದ ಹೋದವರು ನಾಪತ್ತೆಯಾಗಿರುವ ಬಗ್ಗೆ ಜೂ.11 ರಂದು ಅಜೆಕಾರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇವರನ್ನು ಎಲ್ಲಾ ಕಡೆ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿರಲಿಲ್ಲ. ಈ ನಡುವೆ ಇಂದು ಬೆಳಿಗ್ಗೆ ಸಾಧುರವರ ಮೃತ ದೇಹವು ಕಾರ್ಕಳದ ಹೆರ್ಮುಂಡೆ ಗ್ರಾಮದ ವ್ಯಕ್ತಿಯೊಬ್ಬರ ಜಾಗದ ನೀರಿನ ತೋಡಿನಲ್ಲಿ ಬಿದ್ದರುವುದು ಕಂಡು ಬಂದಿದ್ದು, ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!