ಜೂ. 17- ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮೆಗಾ ಆರ್ಥಿಕ ನೆರವು ವಿತರಣೆ, ಸನ್ಮಾನ

ಮಂಗಳೂರು ಜೂ.13 (ಉಡುಪಿ ಟೈಮ್ಸ್ ವರದಿ): ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಹಾ ನಿರ್ದೇಶಕ ಹಾಗೂ ವಿ. ಕೆ. ಗ್ರೂಪ್ ಆಫ್ ಕಂಪೆನೀಸ್ ಕೆ. ಮುಂಬಯಿ ಸಿಎಂಡಿ ಕೆ.ಎಂ. ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಸಮಾಜ ಕಲ್ಯಾಣ ಮೆಗಾ ಆರ್ಥಿಕ ನೆರವು ವಿತರಣೆ ಹಾಗೂ ದಕ್ಷಿಣ ಕನ್ನಡ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಜೂ. 17ರಂದು ಬೆಳಗ್ಗೆ 10ರಿಂದ ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಗಿದೆ.

ಸಮಾರಂಭವನ್ನು ವಿ.ಕೆ ಗ್ರೂಫ್ ಆಫ್ ಕಂಪೆನೀಸ್‍ನ ಸಿಎಂಡಿ ಕೆ.ಎಂ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಒಕ್ಕೂಟದ ಮಹಾದಾನಿ ಮತ್ತು ಹೇರಂಬಾ ಇಂಡಸ್ಟ್ರೀಸ್ ಲಿ. ನ ಮ್ಯಾನೆಜಿಂಗ್ ಡೈರೆಕ್ಟರ್ ಕನ್ಯಾನ ಸದಾಶಿವ ಶೆಟ್ಟಿ ಭಾಗವಹಿಸಲಿದ್ದಾರೆ. ಹಾಗೂ ವಿಶೇಷ ಆಹ್ವಾನಿತರಾಗಿ ಎಸ್‍ಸಿ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ ಎನ್ ರಾಜೇಂದ್ರಕುಮಾರ್ ಭಾಗವಹಿಸಲಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಸಮಾರಂಭದಲ್ಲಿ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ಶ್ರೀಲತಾ ನಾಗರಾಜ್ ಅವರ ಶಿಷ್ಯ ವೃಂದದವರಿಂದ “ಸನಾತನ ರಾಷ್ಟ್ರಾಂಜಲಿ” ಕಾರ್ಯಕ್ರಮ ನಡೆಯಲಿದೆ.

ಒಕ್ಕೂಟದ ವಿಶೇಷ ಮಹಾನಿರ್ದೇಶಕರು ಮತ್ತು ಆರ್ಗಾನಿಕ್ ಗ್ರೂಪ್ ಆಫ್ ಇಂಡಸ್ಟ್ರೀಸ್‍ನ ತೋನ್ಸೆ ಆನಂದ್ ಎಂ. ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಮಹಾ ನಿರ್ದೇಶಕರಾದ ಎಂಆರ್‍ಜಿ ಗ್ರೂಪ್ಸ್ ನ ಚೆಯರ್ ಮೆನ್ ಕೆ. ಪ್ರಕಾಶ್ ಶೆಟ್ಟಿ, ಶಶಿ ಕೇಟರಿಂಗ್ ಸರ್ವಿಸಸ್ ಬರೋಡ ಇದರ ಎಂ ಡಿ ಶಶಿಧರ ಶೆಟ್ಟಿ ಬರೋಡ, ರಾಕ್ಷಿ ಬಿಲ್ಡರ್ಸ್‍ನ ರಾಜೇಶ್ ಎನ್. ಶೆಟ್ಟಿ, ಅಲಿಯನ್ಸ್ ಇಂಫ್ರಾಸ್ಟ್ರಕ್ಟರ್ ರಿಯಲ್ಟರ್ಸ್ ನ ಅರವಿಂದ್ ಆನಂದ್ ಶೆಟ್ಟಿ, ಫಾರ್ಚುನ್ ಗ್ರೂಪ್ ಆಫ್ ಹೊಟೇಲ್ಸ್‍ನ ಮಾಲಕ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಮೆರಿಟ್ ಹಾಸ್ಪಿಟಾಲಿಟಿಯ ಬೆಳ್ಳಾಡಿ ಅಶೋಕ್ ಎಸ್. ಶೆಟ್ಟಿ, ಪಂಜುರ್ಲಿ ಗ್ರೂಪ್ ಆಫ್ ಹೊಟೇಲ್ಸ್‍ನ ರಾಜೇಂದ್ರ ಶೆಟ್ಟಿ, ಜಾಗತಿ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ಳೂರು ಮೋಹನದಾಸ್ ಶೆಟ್ಟಿ ಜತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!