ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ

ಕೋಟ ಜು.11(ಉಡುಪಿ ಟೈಮ್ಸ್ ವರದಿ): ಮಾಧ್ಯಮ ಎನ್ನುವುದು ಒಂದು ಸಂವಹನ ಕ್ಷೇತ್ರ ಅದು ಸಾಕಷ್ಟು ಬದಲಾವಣೆಗೊಂಡಿದೆ ಎಂದು ಮಣ ಪಾಲದ ಮಾಹೆಯ ಹಿರಿಯ ಸಹಾಯಕ ಪ್ರಾಧ್ಯಾಪಕ ರಾಜ ಗುಡಿ ಅವರು ಹೇಳಿದ್ದಾರೆ.

ಕೋಟದ ವಿವೇಕ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮ ಕ್ಷೇತ್ರ ಒಂದು ಜವಾಬ್ದಾರಿಯುತ ಹಾಗೂ ಸಮಾಜದ ಒರೆಕೊರೆಗಳನ್ನು ಹೊರಜಗತ್ತಿಗೆ ಪ್ರಚುರಪಡಿಸಿ ಅದರ ಸಮಗ್ರ ಅನುಷ್ಠಾನದ ಕೇಂದ್ರವಾಗಿದೆ  ಪ್ರಸ್ತುತ ವಿದ್ಯಾಮಾನದಲ್ಲಿ  ಮಾಧ್ಯಮ ಡಿಜಿಟಲಿಕರಣಗೊಂಡ ಹಿನ್ನಲ್ಲೆಯಲ್ಲಿ ಅವಕಾಶಗಳು ತೆರೆದಿಡುವಂತ್ತಾಗಿದೆ. ಈ ಕ್ಷೇತ್ರದಲ್ಲಿ ಸಾಕಷ್ಟು ಕೊರ್ಸಗಳಿವೆ ಇದನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕಿದೆ ಎಂದರು.

ಈ ವೇಳೆ ಪ್ರೆಸ್ ಕ್ಲಬ್ ವತಿಯಿಂದ ಹಿರಿಯ ಪತ್ರಕರ್ತ ರಂಗಪಯ್ಯ ಹೊಳ್ಳ ಇವರಿಗೆ ಗೌರವ ಪುರಸ್ಕಾರ ನೀಡಲಾಯಿತು. ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಗೌರವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪತ್ರಕರ್ತ ವಸಂತ ಗಿಳಿಯಾರ್ , ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್, ಪತ್ರಕರ್ತ ಚಂದ್ರಶೇಖರ್ ಬೀಜಾಡಿ, ಕಾರ್ಯದರ್ಶಿ ಹರೀಷ್ ಕಿರಣ್ ತುಂಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!