ಉಡುಪಿ ವಕೀಲ ಸಂಘ: ನೂತನ ಆಡಳಿತಾತ್ಮಕ ಹೈಕೋರ್ಟ್ ನ್ಯಾ.ಇ.ಎಸ್. ಇಂದಿರೇಶ್‌ ಭೇಟಿ

ಉಡುಪಿ ಜು.12(ಉಡುಪಿ ಟೈಮ್ಸ್ ವರದಿ): ಜಿಲ್ಲೆಯ ನೂತನ ಆಡಳಿತಾತ್ಮಕ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಹೈಕೋರ್ಟ್ ನ್ಯಾಯಮೂರ್ತಿ ಇ. ಎಸ್. ಇಂದಿರೇಶ್ ಅವರನ್ನು ಇಂದು ಉಡುಪಿ ವಕೀಲರ ಸಂಘದ ನಿಯೋಗವು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದೆ

ಈ ಸಂದರ್ಭದಲ್ಲಿ ನಿಯೋಗದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಜತೆ ಕಾರ್ಯದರ್ಶಿ ಬೈಲೂರು ರವೀಂದ್ರ ದೇವಾಡಿಗ, ಕಾರ್ಯಕಾರಿ ಸಮಿತಿ ಸದಸ್ಯ ಆರೂರು ಸುಕೇಶ್ ಶೆಟ್ಟಿ, ವಕೀಲರ ಸಂಘದ ಸದಸ್ಯ ರಜನಿಕಾಂತ್  ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *

error: Content is protected !!