ಉಡುಪಿ ವಕೀಲರ ಸಂಘದಿಂದ ರಾಜ್ಯ ನೂತನ ಉಪ ಲೋಕಾಯುಕ್ತರ ಭೇಟಿ

ಉಡುಪಿ ಜು.12(ಉಡುಪಿ ಟೈಮ್ಸ್ ವರದಿ): ಕರ್ನಾಟಕ ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ಇತ್ತೀಚೆಗೆ  ನೇಮಕಗೊಂಡ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ಇಂದು  ಉಡುಪಿ ವಕೀಲರ ಸಂಘದ ನಿಯೋಗವು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದೆ. 

ನೂತನ ಉಪ ಲೋಕಾಯುಕ್ತರನ್ನು ಉಡುಪಿಗೆ ಆಹ್ವಾನಿಸಿದ ನಿಯೋಗವು, ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿ ಹಾಗೂ ನೌಕರ ವರ್ಗದಲ್ಲಿ ಚುರುಕು ಮೂಡಿಸಿ, ಜನ ಸಾಮಾನ್ಯರಿಗೆ ಸರಕಾರಿ ಸೇವೆಗಳು ಶೀಘ್ರ ದೊರಕುವಂತೆ ಮಾಡಬೇಕೆಂದು ಮನವಿ ಮಾಡಿತು. 

ಈ ಸಂದರ್ಭದಲ್ಲಿ ನಿಯೋಗದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಜತೆ ಕಾರ್ಯದರ್ಶಿ ಬೈಲೂರು ರವೀಂದ್ರ ದೇವಾಡಿಗ, ಕಾರ್ಯಕಾರಿ ಸಮಿತಿ ಸದಸ್ಯ ಆರೂರು ಸುಕೇಶ್ ಶೆಟ್ಟಿ ಮತ್ತು ವಕೀಲರ ಸಂಘದ ಸದಸ್ಯ ರಜನಿಕಾಂತ್  ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!