ಶ್ರೀ ಕ್ಷೇತ್ರ ಪೆಲತ್ತೂರಿಗೆ ದ್ವಾರಕಾಮಯಿ ಮಠದ ಶೀಸಾಯಿ ಈಶ್ವರ್ ಗುರೂಜಿ ಭೇಟಿ

ಉಡುಪಿ ಜು.14 (ಉಡುಪಿ ಟೈಮ್ಸ್ ವರದಿ):  ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ದ್ವಾರಕಾಮಯಿ ಮಠದ ಪೀಠಾಧಿಪತಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ 108 ದಿನಗಳಲ್ಲಿ 108 ಕ್ಷೇತ್ರ ಪ್ರದಕ್ಷಿಣೆ 31 ದಿನದ ಸಂದರ್ಶನ ಶ್ರೀ ಕ್ಷೇತ್ರ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಇಂದು ನಡೆಯಿತು.

ಈ ವೇಳೆ ಶ್ರೀ ಸಾಯಿ ಈಶ್ವರ್ ಗುರೂಜಿ ಆಶೀರ್ವಚನ ನೀಡಿ, ಹಿಂದೂ ಧರ್ಮದ ರಕ್ಷಣೆಗೆ ಎಲ್ಲರೂ ಒಂದಾಗಿ ಕೆಲಸ ಮಾಡಬೇಕಾಗಿದೆ. ಮತಾಂತರ ಮುಂತಾದ ವ್ಯಾಧಿ ನಮ್ಮ ಸಮಾಜದಿಂದ ದೂರವಾಗಬೇಕು. ಗಡಿಯಲ್ಲಿ ದೇಶ ರಕ್ಷಣೆ ಮಾಡುವ ಯೋಧರಿಗೆ ನೈತಿಕ ಬೆಂಬಲ ನೀಡುವ ಉದ್ದೇಶ ದಿಂದ ಈ ಕಾರ್ಯ ನಡೆಯುತ್ತಿರುದಾಗಿ ತಿಳಿಸಿದರು.

ಇದೇ ವೇಳೆ ಕ್ಷೇತ್ರದ ವತಿಯಿಂದ ಆಡಳಿತ ಮೊಕ್ತೇಸರ ರಮೇಶ್ ನಾಯಕ್ ರವರು ಗುರೂಜಿಯವರನ್ನು ಗೌರವಿಸಿದರು. ಹಾಗೂ ಗುರೂಜಿಯವರು ಬಿಲ್ವಪತ್ರ ಗಿಡ ಮತ್ತು ಮನವಿ ಪತ್ರವನ್ನು ಆಡಳಿತ ಮಂಡಳಿಯ ಸದಸ್ಯರಿಗೆ ನೀಡಿದರು. 

ಈ ಸಂದರ್ಭದಲ್ಲಿ ನೀರೆ ಗ್ರಾ.ಪಂ ಮಾಜಿ ಅಧ್ಯಕ್ಷ ಸದಾನಂದ ಪ್ರಭು, ಪುರೋಹಿತ ರಮೇಶ್ ಭಟ್, ಪೆಲತ್ತೂರು ಫ್ರೆಂಡ್ಸ್ ಕ್ಲಬ್ ಸದಸ್ಯರು, ಜಿ.ಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಸತೀಶ್ ದೇವಾಡಿಗ, ರಾಘವೇಂದ್ರ ಪ್ರಭು, ಕರ್ವಾಲು, ನಿಲೇಶ್ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!