ಉಡುಪಿ ಎಸ್ಸೆಸ್ಸೆಫ್‌ನಿಂದ ಮಾದಕ ದ್ರವ್ಯ ವ್ಯಸನದ ವಿರುದ್ದ ಜಾಗೃತಿ ಅಭಿಯಾನ

ಉಡುಪಿ, ಜು.14(ಉಡುಪಿ ಟೈಮ್ಸ್ ವರದಿ): ಎಸ್‌ಎಸ್‌ಎಫ್ ಉಡುಪಿ ಡಿವಿಷನ್ ವತಿಯಿಂದ ಉಡುಪಿ ನಗರ ಪೊಲೀಸ್ ಠಾಣೆ ಸಹಯೋಗದೊಂದಿಗೆ ಮಾದಕ ದ್ರವ್ಯ ವಿರೋಧಿ ಮಾಸಾಚರಣೆಯ ಅಂಗವಾಗಿ ಕ್ಯಾಂಪಸ್ ವಿದ್ಯಾರ್ಥಿಗಳಿಗಾಗಿ ಮಾದಕ ವ್ಯಸನದ ವಿರುದ್ದ ಜಾಗೃತಿ ಅಭಿಯಾನವನ್ನು ಇಂದು ದೊಡ್ಡಣಗುಡ್ಡೆ ರಹ್ಮಾನಿಯ ಜುಮ್ಮಾ ಮಸೀದಿಯಲ್ಲಿ ನಡೆಯಿತು.

ಕಾರ್ಯಾಗಾರವನ್ನು ಮಸೀದಿ ಸದರ್ ಉಸ್ತಾದ್, ಮಾಜಿ ಡಿವಿಷನ್ ಅಧ್ಯಕ್ಷ ಅಬ್ದುರ್ರಹ್ಮಾನ್ ಸಹದಿ ಉದ್ಘಾಟಿಸಿದರು.

ಈ ವೇಳೆ ಉಡುಪಿ ನಗರ ಠಾಣೆಯ ಪೋಲಿಸ್ ಉಪನಿರೀಕ್ಷಕರುಗಳಾದ ಈರಣ್ಣ ಶ್ರೀರಂಗುಪ್ಪಿ ಹಾಗೂ ಪುನೀತ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ಬಗ್ಗೆ ಹಾಗೂ ಸಂಚಾರ ನಿಯಮ ಪಾಲನೆ ಬಗ್ಗೆ ಮಾಹಿತಿಯನ್ನು ನೀಡಿದರು.

ಎಸ್‌ಎಸ್‌ಎಫ್ ಉಡುಪಿ ಡಿವಿಷನ್ ಅಧ್ಯಕ್ಷ ಇಮ್ತಿಯಾಝ್ ಸಂತೋಷ್ ನಗರ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಪೋಲಿಸ್ ಸಿಬ್ಬಂದಿಗಳಾದ ಬಶೀರ್, ಚೇತನ್, ದೊಡ್ಡಣಗುಡ್ಡೆ ಮಸೀದಿಯ ಕಾರ್ಯದರ್ಶಿ ಖಾಸಿಂ, ಸಮಾಜ ಸೇವಕ ರಪೀಕ್ ದೊಡ್ಡಣಗುಡ್ಡೆ, ಡಿವಿಷನ್ ಪ್ರಧಾನ ಕಾರ್ಯದರ್ಶಿ ಫವಾಝ್ ದೊಡ್ಡಣಗುಡ್ಡೆ, ಕೋಶಾಧಿಕಾರಿ ಮುತ್ತಲಿಬ್ ರಂಗನಕೆರೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!