ಮನೆ ಕಳ್ಳತನದ ಆರೋಪಿ ಬಂದನ

ಕಾರ್ಕಳ ಸೆ.2(ಉಡುಪಿ ಟೈಮ್ಸ್ ವರದಿ): ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆ ಎಂಬಲ್ಲಿರುವ ಮನೆಯಲ್ಲಿ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳದ ಮಾಳ ಗ್ರಾಮದ ಸಂತೋಷ್.ಟಿ(32) ಬಂಧಿತ ಆರೋಪಿ. ಬಂಧಿತನಿಂದ ಕಳವು ಮಾಡಿದ 33 ಪವನ್ ತೂಕದ 10,05,000/- ಮೌಲ್ಯದ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಆ.30 ರಂದು ಸಂಜೆ ವೇಳೆ ಕಾರ್ಕಳದ ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿರುವ ಮನೆಯ ಒಳ ನುಗ್ಗಿದ ಕಳ್ಳರು ಕೋಣೆಯ ಲಾಕರ್‌‌ನಲ್ಲಿ ಇಟ್ಟಿದ್ದ 10,05,000 ರೂ. ಮೌಲ್ಯದ 33 ಪವನ್ ತೂಕದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಆರೋಪಿಯನ್ನು ಬಂಧಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!