ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ SC/ST ಅಧಿಕಾರಿಗಳ ಮತ್ತು ನೌಕರರ ಕಲ್ಯಾಣ ಸಂಘ- ಅಧ್ಯಕ್ಷರಾಗಿ ಶಿವರಾಜು.ಎಂ ಆಯ್ಕೆ

ಉಡುಪಿ ಸೆ.14(ಉಡುಪಿ ಟೈಮ್ಸ್ ವರದಿ): ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಕಲ್ಯಾಣ ಸಂಘ ಬೆಂಗಳೂರು ಇದರ ಉಡುಪಿ ಜಿಲ್ಲಾ ಶಾಖೆಯ ನೂತನ ಅಧ್ಯಕ್ಷರಾಗಿ ಶಿವರಾಜು.ಎಂ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್‌ನ ವ್ಯವಸ್ಥಾಪಕರಾದ ರಾಜೇಶ್ವರಿ ಅವರು ಜಿಲ್ಲಾ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಈ ವೇಳೆ ಗೌರಾಧ್ಯಕ್ಷರಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯ, ರಾಜ್ಯ ಪರಿಷತ್ ಸದಸ್ಯರಾಗಿ ಸುರೇಶ್, ಹಿರಿಯ ಉಪಾಧ್ಯಕ್ಷರು ಸುದರ್ಶನ್ ಎಸ್, ಉಪಾಧ್ಯಕ್ಷರು ನಾರಾಯಣ ಬೀಜಾಡಿ, ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ನಾಯ್ಕ, ಖಜಾಂಚಿಯಾಗಿ ನಾಗೇಶ್. ಬಿ, ಸಹ ಕಾರ್ಯದರ್ಶಿಯಾಗಿ ಜಯಕರ್, ಕ್ರೀಡಾ & ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಮಾಲತಿ, ಆಂತರೀಕ ಲೆಕ್ಕಪರಿಶೋಧಕರಾಗಿ ಸದಾಶಿವ, ಸಂಘಟನಾ ಕಾರ್ಯದರ್ಶಿಯಾಗಿ ಸುಬ್ಬಯ್ಯ, ವಿಜಯ ಅವರನ್ನು ಆಯ್ಕೆ ಮಾಡಲಾಯಿತು.

Leave a Reply

Your email address will not be published. Required fields are marked *

error: Content is protected !!