ಉಡುಪಿ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

ಉಡುಪಿ ಅ.09(ಉಡುಪಿ ಟೈಮ್ಸ್ ವರದಿ): ಅನಾರೋಗ್ಯದಿಂದ ಅಸ್ವಸ್ಥಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಪ್ರದೀಪ್ ಕುಮಾರ್ ಕೆ (38) ರವರು ಉಡುಪಿಯಲ್ಲಿ ತಮ್ಮ ಮಾವನ ಮನೆಯಲ್ಲಿ ವಾಸಮಾಡಿಕೊಂಡಿದ್ದರು. ತ್ರಿಶಾ ಶಿಕ್ಷಣ ಸಂಸ್ಥೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದರು. ಇಂದು ಬೆಳಿಗ್ಗಿನ ಜಾವ ಪ್ರದೀಪ ಕುಮಾರ ಕೆ  ರವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಪ್ರದೀಪ ಕುಮಾರ್ ಕೆ ರವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮೃತ ಪ್ರದೀಪ್ ಅವರ ಸಂಬಂಧಿ ಶರತ್ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!