ಕಾರ್ಕಳ : ಉದ್ಯಮಿ ರತನ್ ಟಾಟಾರಿಗೆ ನುಡಿನಮನ

ಕಾರ್ಕಳ ಅ.12(ಉಡುಪಿ ಟೈಮ್ಸ್ ವರದಿ):  ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಇತ್ತೀಚೆಗೆ ಅಗಲಿದ ಉದ್ಯಮ ಸಂತ, ಮಾತೃ ಹೃದಯಿ ಉದ್ಯಮಿ, ಟಾಟಾ ಸಮೂಹ ಸಂಸ್ಥೆಗಳ ಮಾಜಿ ಮುಖ್ಯಸ್ಥ ರತನ್ ಟಾಟಾ ಅವರಿಗೆ ನುಡಿನಮನವನ್ನು ಸಲ್ಲಿಸಲಾಯಿತು.

ಖ್ಯಾತ ವಾಗ್ಮಿ ರಾಜೇಂದ್ರ ಭಟ್ ಕೆ. ಅವರು ನುಡಿ ನಮನ ಸಲ್ಲಿಸಿ ರತನ್ ಟಾಟಾರ ಜೀವನ ಗಾಥೆಯನ್ನು  ಪ್ರಸ್ತುತಪಡಿಸಿದರು.

ಈ ಸಂದರ್ಭದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಡಾ.ಸುಧಾಕರ್, ಟ್ರಸ್ಟಿ ಅನಿಲ್ ಕುಮಾರ್ ಜೈನ್, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ನಿರ್ವಹಣಾಧಿಕಾರಿ ದಿನೇಶ್ ಎಂ.ಕೊಡವೂರ್, ಉಪಪ್ರಾಂಶುಪಾಲರುಗಳಾದ ಸಾಹಿತ್ಯ ಮತ್ತು ಉಷಾ ರಾವ್ ಯು ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ  ಕೆ. ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!