ಕಾರ್ಕಳ: ಷೇರು ಮಾರುಕಟ್ಟೆಯಲ್ಲಿ ನಷ್ಟ- ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಕಾರ್ಕಳ ಅ.14(ಉಡುಪಿ ಟೈಮ್ಸ್ ವರದಿ): ಷೇರು ಮಾರುಕಟ್ಟೆಯಲ್ಲಿ ನಷ್ಟ ಉಂಟಾಗಿ ಮಾನಸಿಕವಾಗಿ ನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಗ್ರಾಮಾಂತರ ರಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದಿನೇಶ್‌ ಎಮ್‌ (34) ಆತ್ಮಹತ್ಯೆ ಮಾಡಿಕೊಂಡವರು. ಕರ್ನಾಟಕ ಬ್ಯಾಂಕ್‌ ನ ಉದ್ಯೋಗಿಯಾಗಿದ್ದ ಇವರು ಎರಡು ತಿಂಗಳ ಹಿಂದೆ ಹುದ್ದೆಗೆ ರಾಜಿನಾಮೆ ನೀಡಿ ಮನೆಯಲ್ಲಿ ಇದ್ದು ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದರು. ಈ ನಡುವೆ ಮಾನಸಿಕವಾಗಿ ಜೀವನದಲ್ಲಿ ನೊಂದು ಅ.13 ರಂದು  ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!