“ಗಂಟ್ ಕಲ್ವೆರ್” ತುಳು ಚಿತ್ರ ಮೇ 23 ರಂದು ರಾಜ್ಯಾದ್ಯಾಂತ ಬಿಡುಗಡೆ
ಮಂಗಳೂರು: ಬಹು ನಿರೀಕ್ಷೆಯ “ಗಂಟ್ ಕಲ್ವೆರ್” ತುಳು ಚಿತ್ರ ಇದೇ ಬರುವ ಮೇ 23 ರಂದು ರಾಜ್ಯಾದ್ಯಾಂತ ಬಿಡುಗಡೆ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ತುಳು ನಾಟಕ ಧಾರಾವಾಹಿ ಸಿನಿಮಾಗಳಲ್ಲಿ ತುಳುನಾಡಿನ ಕೀರ್ತಿಯನ್ನು ಎತ್ತಿಹಿಡಿದ ಸುಧಾಕರ್ ಬನ್ನಂಜೆಯವರು ಕತೆ ಚಿತ್ರಕತೆ ಸಂಭಾಷಣೆ ಹಾಡು ಬರೆದು ನಿರ್ದೇಶನ ಮಾಡಿದ್ದಾರೆ.
ತುಳುಮೂಲದ ಕನ್ನಡ ಚಿತ್ರರಂಗದ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ವಿ ಮನೋಹರ್ ಇದಕ್ಕೆ ಸಂಗೀತ ನೀಡಿದ್ದಾರೆ. ತುಳುನಾಡಿನ ಅಪ್ಪಟ ಪ್ರತಿಭೆ ತಮ್ಮ ಲಕ್ಷ್ಮಣ ಕಲಾನಿರ್ದೇಶನ , ಕೆ.ಗಿರೀಶ್ ಕುಮಾರ್ ಸಂಕಲನ, ಶಂಕರ್ ರವಿಕಿಶೋರ್ ಛಾಯಾಗ್ರಹಣ. ಪ್ರಶಾಂತ್ ಎಳ್ಳಂಪಳ್ಳಿ ಮತ್ತು ರಾಮದಾಸ್ ಸಸಿಹಿತ್ಲು ಸಹ ನಿರ್ದೇಶಕರಾಗಿ ದುಡಿದಿದ್ದಾರೆ.
ಸ್ನೇಹಕೃಪಾ ಲಾಂಚನದಲ್ಲಿ ಉಪ್ಪಳ ರಾಜಾರಾಮ ಶೆಟ್ಟಿ ಅರ್ಪಿಸಿ, ಗಿರೀಶ್ ಪೂಜಾರಿ ಸಹಕಾರದೊಂದಿಗೆ ಸುಧಾಕರ ಬನ್ನಂಜೆ ನಿರ್ಮಿಸಿರುವ ಈ ಚಿತ್ರಕ್ಕೆ ಮಮತಾ ಎಸ್ ಬನ್ನಂಜೆ , ಕೃತಿ ಆರ್ ಶೆಟ್ಟಿ, ಪ್ರಾರ್ಥನ್ ಬನ್ನಂಜೆ ಸಹ ನಿರ್ಮಾಪಕರಾಗಿದ್ದಾರೆ.
ತಾರಾಗಣದಲ್ಲಿ ನವೀನ್ ಪಡೀಲ್, ಅರವಿಂದ ಬೋಳಾರ್, ಆರ್ಯನ್ ಶೆಟ್ಟಿ, ,ಸ್ಮಿತಾ ಸುವರ್ಣ, ಭೋಜರಾಜ್ ವಾಮಂಜೂರು, ಸುಧೀರ್ ಕೊಠಾರಿ ಸೇರಿದಂತೆ ತುಳುನಾಡ ಅನೇಕ ಪ್ರತಿಭಾವಂತ ನಟ ನಟಿಯರು ಅಭಿನಯಿಸಿದ್ದಾರೆ. ಪ್ರತಿಭಾವಂತ ನಾಯಕ ನಟರಾದ ಅಥರ್ವ ಪ್ರಕಾಶ್ , ಶ್ರೀಕಾಂತ ರೈ, ಪ್ರಣವ್ ಹೆಗ್ಡೆ , ಶೈಲೇಶ್ ಕೋಟ್ಯಾನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನು, ಪತ್ರಿಕಾಗೋಷ್ಠಿಯಲ್ಲಿ ಉಮೇಶ್ ಮಿಜಾರ್, ರಾಕೇಶ್ ಆಚಾರ್ಯ, ಆರ್ಯನ್ ಶೆಟ್ಟಿ, ಸುಧಾಕರ ಕುದ್ರೋಳಿ, ಪ್ರಶಾಂತ್ ಆಚಾರ್ಯ, ನಾಗೇಶ್ ಡಿ ಶೆಟ್ಟಿ, ತಮ್ಮ ಲಕ್ಷ್ಮಣ ಉಪಸ್ಥಿತರಿದ್ದರು.





