ಉಡುಪಿ: ರಂಗ ಭೂಮಿ ಕಲಾವಿದರಿಗೆ ಪಡಿತರ ಕಿಟ್ ವಿತರಿಸಿದ ಸಮಾಜಸೇವಕ ಲೀಲಾಧರ ಶೆಟ್ಟಿ

ಉಡುಪಿ(ಉಡುಪಿ ಟೈಮ್ಸ್ ವರದಿ): ಉಡುಪಿ ಜಿಲ್ಲೆಯ ನಾಟಕ ಕಲಾವಿದರ ಒಕ್ಕೂಟ ಇದರ ಅಧ್ಯಕ್ಷರಾಗಿರುವ ಸಮಾಜ ಸೇವಕ ಲೀಲಾಧರ ಶೆಟ್ಟಿ ಜಿಲ್ಲೆಯ ಹತ್ತು ನಾಟಕ ತಂಡದ ಸುಮಾರು 48 ಕಲಾವಿದರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು. ಜಿಲ್ಲೆಯ ರಂಗಭೂಮಿ ತಂಡಗಳ ಕಲಾವಿದರಿಗೆ ಸಹಾಯ ಹಸ್ತ ಚಾಚಿದ್ದಾರೆ. ವಿವಿಧ ತಂಡಗಳ ಕಲಾವಿದರಿಗೆ ಉಡುಪಿಯಲ್ಲಿ ಕಿಟ್ ವಿತರಿಸಲಾಯಿತು.

ಕೊರೊನಾ‌ ಸಂಕಷ್ಟ ಕಾಲದಲ್ಲಿ ಬದುಕಿನ ಎಲ್ಲಾ‌ ಅವಕಾಶವನ್ನು ಕಳಕೊಂಡವರು ಕಲಾವಿದರು. ಸತತ ಎರಡು ವರ್ಷ ಆದಾಯವಿಲ್ಲದೆ ಕಳೆದ ಕಲಾವಿದರಿಗೆ ಒಕ್ಕೂಟದ ಅಧ್ಯಕ್ಷರು ಬೆಂಬಲವಾಗಿ ನಿಂತಿದ್ದಾರೆ. ಉತ್ತಮ ಮೌಲ್ಯದ ಕಿಟ್ ನೀಡುವುದರ ಮೂಲಕ ಒಂದಷ್ಟು ಆಶಾದಾಯಕ ಬದುಕಿಗೆ ಸಹಕರಿಸಿದ್ದಾರೆ. ಲೀಲಾಧರ ಶೆಟ್ಟಿಯವರ ಕಲಾ ಸೇವೆಗೆ ಕಲಾವಿದರು ಕೃತಜ್ಞತೆ ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!