ನನ್ನನ್ನು ಇಷ್ಟಪಟ್ಟವರಿಗೂ, ಇಷ್ಟ ಪಡದವರಿಗೂ ಧನ್ಯವಾದ – ಡ್ರಗ್ಸ್ ಕೇಸ್ ಬಗ್ಗೆ ರಾಗಿಣಿ ಟಾಂಗ್

ವಿಜಯಪುರ: ಡ್ರಗ್ಸ್ ಕೇಸ್ ವಿಚಾರದ ಬಗ್ಗೆ ಹೆಚ್ಚಿಗೆ ಮಾತಾಡೋದಿಲ್ಲ. ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸವಿದೆ. ನಾವು ತಪ್ಪು ಮಾಡಿಲ್ಲ ಅಂದ್ರೆ ನಾವು ಚಿಂತೆ ಮಾಡಬಾರದು ಎಂದು ರಾಗಿಣಿ ದ್ವಿವೇದಿ ಡ್ರಗ್ಸ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದರು.

ವಿಜಯಪುರದಲ್ಲಿ ಬಡ ಜನರಿಗೆ ಆಹಾರ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು ಡ್ರಗ್ಸ್ ವಿಚಾರದಲ್ಲಿ ಶೇ.100 ಟಾರ್ಗೆಟ್ ಮಾಡಲಾಗಿದೆ. ಬರೀ ಒಂದು ಕೇಸ್ ವಿಚಾರವಾಗಿ ಮಾತ್ರವಲ್ಲ. ಹೆಣ್ಮಕ್ಕಳು ಅಂದ್ರೆ ಸಾಕು ಪ್ರತಿಯೊಂದು ವಿಚಾರದಲ್ಲೂ ಸಮಾಜದಲ್ಲಿ ಟಾರ್ಗೆಟ್ ಮಾಡಲಾಗುತ್ತಿದೆ. ಹೆಣ್ಮಕ್ಕಳನ್ನು ತುಂಬಾ ಸುಲಭವಾಗಿ ಟಾರ್ಗೆಟ್ ಮಾಡೋದು ಹವ್ಯಾಸವಾಗಿದೆ ಎಂದು ಕಿಡಿಕಾರಿದರು.

ಆರೋಪ ಮಾಡೋ ಬದಲು ಎಲ್ಲರೂ ನಿಮ್ಮ ನಿಮ್ಮ ಕೆಲಸದಲ್ಲಿ ಸರಿ ಆಗಿದ್ರೆ ಸಾಕು. ಪ್ರಶಾಂತ್ ಸಂಬರಗಿ ಅವರು ನಿಜವಾಗಿಯೂ ನನಗೆ ಪರಿಚಯವಿಲ್ಲ, ಅವರೊಂದಿಗೆ ನಾನು ಮಾತಾಡಿಯೂ ಇಲ್ಲ. ಅವರು ಏನು ಮಾತಾಡ್ತಾರೋ ಮಾತಾಡಲಿ, ನನಗೆ ಅವರ ಪರಿಚಯವಿಲ್ಲ. ಅವರವರ ಅಭಿಪ್ರಾಯವನ್ನು ಮಾತಾಡ್ತಾರೆ, ಅದನ್ನು ನಾನು ತಡೆಯಲು ಆಗಲ್ಲಾ ಎಂದರು
ನಾನು ಏನು ಮಾಡ್ತೀನಿ, ಏನು ಮಾತಾಡ್ತೀನಿ ಅನ್ನೋದನ್ನು ಮಾತ್ರ ಕಂಟ್ರೋಲ್ ಮಾಡ್ತೀನಿ. ನನ್ನನ್ನು ಎಲ್ಲರೂ ಇಷ್ಟಪಡ್ತಾರೆ, ನನಗೆ ಅಭಿಮಾನಿಗಳು ಇದ್ದಾರೆ, ಅವರಿಗೆಲ್ಲ ಧನ್ಯವಾದ ಹೇಳ್ತೆನೆ. ನನ್ನನ್ನು ಇಷ್ಟಪಟ್ಟವರಿಗೂ, ಇಷ್ಟ ಪಡದವರಿಗೂ ಧನ್ಯವಾದ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು.

Leave a Reply

Your email address will not be published. Required fields are marked *

error: Content is protected !!