ಜೆಡಿಎಸ್’ನಿಂದ ಉಚ್ಚಾಟನೆ ಮಾಡಿದ್ದರಿಂದ ತಂದೆ ಕಾಂಗ್ರೆಸ್ ಸೇರ್ಪಡೆಯಾದರು: ಯತೀಂದ್ರ

ಮೈಸೂರು, ಜು 2: ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಪಕ್ಷಾಂತರಗೊಂಡಿರುವ ವಿಚಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರೆ ನಾಯಕರ ವಿರುದ್ದದ ಜೆಡಿಎಸ್ ಮುಖಂಡ ಕುಮಾರ ಸ್ವಾಮಿ ಅವರ ಹೇಳಿಕೆಗೆ ಮಾಜಿ ಸಿಎಂ ‌ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶಾಸಕ ಯತೀಂದ್ರ, ಅವರು, ಸಿದ್ದರಾಮಯ್ಯ ಅವರು ತಾವಾಗಿಯೇ ಜೆಡಿಎಸ್ ಬಿಟ್ಟು ಬರಲಿಲ್ಲ. ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿದ್ದರಿಂದ ಅವರು ಕಾಂಗ್ರೆಸ್ ಸೇರ್ಪಡೆಯಾದರು. ಕಾಂಗ್ರೆಸ್ ಸೇರ್ಪಡೆಯಾದ ಜೆಡಿಎಸ್ ಮುಖಂಡರ ಪಾಪದ ಕೊಡ ತುಂಬುವುದಕ್ಕೆ ಅವರು ಯಾವುದೇ ಪಾಪ ಮಾಡಿಲ್ಲ, ” ಎಂದು ಟಾಂಗ್ ನೀಡಿದ್ದಾರೆ.

ಇದೇ ವೇಳೆ “ಸಿದ್ದರಾಮಯ್ಯ ಮತ್ತು ಅವರ ಸಹಪಾಠಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಸಿದ್ದರಾಮಯ್ಯ ಅವರಿಗೆ ಒಳ್ಳೆಯದೇ ಆಯಿತು. ಈಗ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದೇವೆ. ಆದರೆ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಭವಿಷ್ಯವಿಲ್ಲ,” ಎಂದು ಜೆಡಿಎಸ್ ಪಕ್ಷದ ನಾಯಕರನ್ನು ಟೀಕಿಸಿದರು.

Leave a Reply

Your email address will not be published. Required fields are marked *

error: Content is protected !!