ತಂಗಿಯ ಮೃತದೇಹ ಒಯ್ಯುತ್ತಿದ್ದ ಸಂದರ್ಭ ಅಪಘಾತ , ಅಣ್ಣ ಸಾವು

ಹಿರಿಯೂರು (ಚಿತ್ರದುರ್ಗ):ತಂಗಿಯ ಮೃತದೇಹವಿದ್ದ ಆಂಬುಲೆನ್ಸ್ ನ್ನು ಹಿಂಬಾಲಿಸುತ್ತಿದ್ದ ಅಣ್ಣನ ಕಾರು ಅಪಘಾತಕ್ಕೀಡಾಗಿ ಅಣ್ಣ ಮೃತಪಟ್ಟ ಘಟನೆ ತಾಲ್ಲೂಕಿನ ಆದಿವಾಲ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಸುಕಿನ ಜಾವ ನಡೆದಿದೆ. ಪತ್ರಕರ್ತ ರಾಮು ಮುದಿಗೌಡ ( 56) ಮೃತಪಟ್ಟವರು.

ಇವರ ತಂಗಿ ರೇಣುಕಾ ಅವರು ಅನಾರೋಗ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದರು. ಇಂದು ಮುಂಜಾನೆ ಆಂಬುಲೆನ್ಸ್ ನಲ್ಲಿ ಸಹೋದರಿಯ ಮೃತದೇಹವನ್ನು ತೆಗೆದುಕೊಂಡು ಹಿರೇಕೇರೂರಿಗೆ ಹೊರಟಿದ್ದರು. ಈ ವೇಳೆ ಆಂಬುಲೆನ್ಸ್ ಹಿಂಬಾಲಿಸುತ್ತಿದ್ದಾಗ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಅಣ್ಣ ಕೊನೆಯುಸಿರೆಳೆದಿದ್ದಾರೆ.

ರಾಮು ಅವರು ಪತ್ರಕರ್ತರಾಗಿದ್ದರು. ಅಲ್ಲದೆ ಹಿರೇಕೆರೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಮಂಡಳಿ ಸದಸ್ಯರಾಗಿ ಹಾಗೂ ಹಿರೇಮೊರಬ ಗ್ರಾಮದ ವಿಎಸ್ಎಸ್ ಬ್ಯಾಂಕಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!