ಬೆಂಗಳೂರು: ಡಿ.ಆರ್.ಡಿ.ಓ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಇನ್ನಿಲ್ಲ

ಬೆಂಗಳೂರು ಜು.2: ಡಿ.ಆರ್.ಡಿ.ಓ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ನಿಧನರಾಗಿದ್ದಾರೆ.ಕಳೆದ 10 ದಿನಗಳ ಹಿಂದೆ ತೀವ್ರ ಹೃದಯಾಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮೆದುಳು ನಿಷ್ಕ್ರಿಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಹಿರಿಯ ಪತ್ರಕರ್ತ ನಾಗೇಶ್ ರಾವ್ ಅವರ ಪುತ್ರರಾಗಿರುವ ಸುಧೀಂದ್ರ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.ಮೃತರ ದೇಹದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದು, ಅದರಂತೆ ಬೆಂಗಳೂರು ಮೆಡಿಕಲ್ ಕಾಲೇಜಿಗೆ ಅಂಗಾಂಗ ದಾನ ಮಾಡಲಿದ್ದಾರೆ. ಡಿ.ಆರ್.ಡಿ.ಓ ನಲ್ಲಿ ವಿಜ್ಞಾನಿ ಯಾಗಿ ಕಾರ್ಯ ನಿರ್ವಹಿದ್ದ ಇವರು, ಎಚ್.ಎ.ಎಲ್.ನ ಹಿರಿಯ ನಿವೃತ್ತ ಎಂಜಿನಿಯರ್ ಹಾಗೂ ವೈಜ್ಞಾನಿಕ ವಿಚಾರಗಳ ಲೇಖಕರೂ ಆಗಿದ್ದಾರೆ

Leave a Reply

Your email address will not be published. Required fields are marked *

error: Content is protected !!