ಕುಂದಾಪುರ: ಸಿಲಿಂಡರ್ ಸ್ಫೋಟ, ಮನೆ ಮಾಲೀಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಕುಂದಾಪುರ( ಉಡುಪಿ ಟೈಮ್ಸ್ ವರದಿ): ಇಲ್ಲಿನ ವಿನಾಯಕ ಟಾಕೀಸಿನ ಸಮೀಪದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ತಗುಲಿದ ಪರಿಣಾಮ ಸಿಲಿಂಡರ್ ಸ್ಫೋಟಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ.


ಮನೆಯ ಮಾಲೀಕ ವಿಸೆಂಟ್ ಡಿ ಸೋಜಾ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು ಸ್ಪೋಟದ ರಭಸಕ್ಕೆ ಮನೆ ಸಂಪೂರ್ಣ ಹಾನಿಗೊಂಡಿದ್ದು. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ಉಡುಪಿ ಟೈಮ್ಸ್ ಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!