ಉಡುಪಿ: ಪೆರ್ಣಂಕಿಲದಲ್ಲಿ 2,000 ಸಸಿ ನೆಡುವ ಸಸ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ( ಉಡುಪಿ ಟೈಮ್ಸ್ ವರದಿ): ಜನತಾ ಪಕ್ಷದ ಸಂಸ್ಥಾಪಕರಾದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ಪೆರ್ಣಂಕಿಲದಲ್ಲಿ 2000 ಗಿಡಗಳನ್ನು ನೆಡುವ ಸಸ್ಯೋತ್ಸವ ಕಾರ್ಯಕ್ರಮಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಶಾಸಕರಾದ ಲಾಲಾಜಿ ಮೆಂಡನ್ ಇಂದು ಚಾಲನೆ ನೀಡಿದರು.

ಈ ಕಾರ್ಯಕ್ರಮವನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶಾ ನಾಯಕ್ ರವರು ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಕಾಪು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಕುಮಾರ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಗೀತಾಂಜಲಿ ಸುವರ್ಣ, ಸುಮಾ ಶೆಟ್ಟಿ, ಗುರುಪ್ರಸಾದ್ ಶೆಟ್ಟಿ, ಚೇರ್ಕಾಡಿ ಪ್ರತಾಪ್ ಶೆಟ್ಟಿ ಭಾರತೀಯ ಜನತಾ ಪಾರ್ಟಿ ಜಿಲ್ಲೆಯ ಹಾಗೂ ಕಾಪು ಕ್ಷೇತ್ರದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!