ಹಾವೇರಿ:ಮೊಗವೀರ ಸಮಾಜದವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಶ್ರೀ ಶಾಂತಭೀಷ್ಮ ಸ್ವಾಮಿಗಳಿಂದ ಆಗ್ರಹ

ಹಾವೇರಿ ಜು.29( ಉಡುಪಿ ಟೈಮ್ಸ್ ವರದಿ): ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿಯ ನರಸೀಪುರದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಗುರು ಪೀಠದ ಪೀಠಾಧ್ಯಕ್ಷರಾದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ನೂತನ ಮುಖ್ಯ ಮಂತ್ರಿಯವರಿಗೆ ವಿಡಿಯೋ ಸಂದೇಶದ ಮೂಲಕ ಅಭಿನಂದಿಸಿರುವ ಸ್ವಾಮಿಗಳು, ಮೊಗವೀರ ಸಮಾಜದವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಹಾಗೂ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮತ್ತು ರವಿ ಕುಮಾರ್ ಸಚಿವ ಸಂಪುಟ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!